ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮಾತನಾಡಿ, ‘ಲೋಕ ಅದಾಲತ್ನಲ್ಲಿ ಇನ್ನೂ 300ಕ್ಕೂ ಹೆಚ್ಚು ಅರ್ಜಿಗಳು ವಿಚಾರಣೆ ನಡೆಯುತ್ತಿವೆ. ನಿಗಮದ ವಕೀಲರು ತಪ್ಪದೆ ಹಾಜರಾಗಿ ಪ್ರಕರಣ ಇತ್ಯರ್ಥಪಡಿಸಲು ಸಹಕರಿಸುತ್ತಿದ್ದಾರೆ. ಇತ್ಯರ್ಥ ಆದವರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿಳಂಬ ಮಾಡದೆ ನೀಡಲಾಗುವುದು’ ಎಂದು ಹೇಳಿದರು.