‘ಉತ್ತರಹಳ್ಳಿ ಮುಖ್ಯ ರಸ್ತೆಯ ಚಿಕ್ಕಲಸಂದ್ರ ನಿವಾಸಿಯಾಗಿರುವ ಕೃಷ್ಣಮೂರ್ತಿ ಅವರು ಖಾಸಗಿ ವಾಹನವೊಂದರ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಭಾನುವಾರ ಮಧ್ಯಾಹ್ನ 3.30ರ ಸುಮಾರಿಗೆ ಬಿಎಂಟಿಸಿ ಬಸ್ ನಿಲ್ದಾಣದ ಮೂರನೇ ನಿರ್ಗಮನ ದ್ವಾರದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ನಿಲ್ದಾಣದ ಒಳಭಾಗದಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ (ಕೆಎ 57, ಎಫ್ 4273) ಕೃಷ್ಣಮೂರ್ತಿಯವರಿಗೆ ಡಿಕ್ಕಿ ಹೊಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.