<p><strong>ಬೆಂಗಳೂರು:</strong> ಟ್ಯೂಷನ್ ಮುಗಿಸಿಕೊಂಡು ತನ್ನ ಸಹೋದರಿ ಮತ್ತು ಸ್ನೇಹಿತೆಯರ ಜತೆಗೆ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.</p>.<p>ಭುವನಾ (9) ಮೃತ ವಿದ್ಯಾರ್ಥಿ. ಬಿಎಂಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಸ್ಥಳೀಯರು ದೂರಿದ್ದಾರೆ. ರಾಜಾಜಿನಗರ 1ನೇ ಹಂತದಲ್ಲಿ ಶನಿವಾರ ಬೆಳಿಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದೆ.</p>.<p>ಮಹಾಲಕ್ಷ್ಮಿ ಲೇಔಟ್ನ ಭೋವಿಪಾಳ್ಯದಲ್ಲಿ ಪೋಷಕರೊಂದಿಗೆ ಭುವನಾ ವಾಸವಿದ್ದಳು. ಪಾಂಚಜನ್ಯ ವಿದ್ಯಾಪೀಠ ಶಾಲೆಯಲ್ಲಿ ಓದುತ್ತಿದ್ದಳು.</p>.<p><strong>ಕುಟುಂಬಸ್ಥರ ಆಕ್ರಂದನ:</strong> ಕಣ್ಣ ಮುಂದೆಯೇ ಭುವನಾ ಮೃತಪಟ್ಟಿದ್ದನ್ನು ಕಂಡು ಸಹೋದರಿ ಹಾಗೂ ಸ್ನೇಹಿತರು ಕಣ್ಣೀರು ಹಾಕಿದರು. ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೋಷಕರು ಆಕ್ರಂದನ ಮುಗಿಲುಮುಟ್ಟಿತ್ತು.</p>.<p>ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಸ್ಥಳದಲ್ಲೇ ಬಸ್ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ ಎಂದು ಮೂಲಗಳು ತಿಳಿಸಿವೆ. </p>.<p>ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>9 ವಾಹನಗಳಿಗೆ ಡಿಕ್ಕಿ:</strong> ಬಿಎಂಟಿಸಿ ಬಸ್ನಿಂದ ಸರಣಿ ಅಪಘಾತ ಸಂಭವಿಸಿದ ಘಟನೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ 9ನೇ ಗೇಟ್ ಬಳಿ ಶನಿವಾರ ನಡೆದಿದೆ. ಅಪಘಾತದಿಂದ ಆಟೊ ಚಾಲಕರೊಬ್ಬರು ಗಾಯಗೊಂಡಿದ್ದಾರೆ.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬನಶಂಕರಿ ನಡುವಿನ ಸಂಚರಿಸುವ ಬಸ್ ವೇಗವಾಗಿ ಬಂದು 9 ವಾಹಗಳಿಗೆ ಡಿಕ್ಕಿ ಹೊಡೆದಿದೆ.</p>.<p>ಬಸ್ ಚಾಲಕನಿಗೆ ದಿಢೀರನೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವಘಡ ಸಂಭವಿಸಿದೆ. ಬಸ್ ಜಪ್ತಿ ಮಾಡಲಾಗಿದೆ. ಚಾಲಕನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು.</p>.<p>ಕಬ್ಬನ್ಪಾರ್ಕ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಟ್ಯೂಷನ್ ಮುಗಿಸಿಕೊಂಡು ತನ್ನ ಸಹೋದರಿ ಮತ್ತು ಸ್ನೇಹಿತೆಯರ ಜತೆಗೆ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.</p>.<p>ಭುವನಾ (9) ಮೃತ ವಿದ್ಯಾರ್ಥಿ. ಬಿಎಂಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಸ್ಥಳೀಯರು ದೂರಿದ್ದಾರೆ. ರಾಜಾಜಿನಗರ 1ನೇ ಹಂತದಲ್ಲಿ ಶನಿವಾರ ಬೆಳಿಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದೆ.</p>.<p>ಮಹಾಲಕ್ಷ್ಮಿ ಲೇಔಟ್ನ ಭೋವಿಪಾಳ್ಯದಲ್ಲಿ ಪೋಷಕರೊಂದಿಗೆ ಭುವನಾ ವಾಸವಿದ್ದಳು. ಪಾಂಚಜನ್ಯ ವಿದ್ಯಾಪೀಠ ಶಾಲೆಯಲ್ಲಿ ಓದುತ್ತಿದ್ದಳು.</p>.<p><strong>ಕುಟುಂಬಸ್ಥರ ಆಕ್ರಂದನ:</strong> ಕಣ್ಣ ಮುಂದೆಯೇ ಭುವನಾ ಮೃತಪಟ್ಟಿದ್ದನ್ನು ಕಂಡು ಸಹೋದರಿ ಹಾಗೂ ಸ್ನೇಹಿತರು ಕಣ್ಣೀರು ಹಾಕಿದರು. ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೋಷಕರು ಆಕ್ರಂದನ ಮುಗಿಲುಮುಟ್ಟಿತ್ತು.</p>.<p>ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಸ್ಥಳದಲ್ಲೇ ಬಸ್ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ ಎಂದು ಮೂಲಗಳು ತಿಳಿಸಿವೆ. </p>.<p>ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>9 ವಾಹನಗಳಿಗೆ ಡಿಕ್ಕಿ:</strong> ಬಿಎಂಟಿಸಿ ಬಸ್ನಿಂದ ಸರಣಿ ಅಪಘಾತ ಸಂಭವಿಸಿದ ಘಟನೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ 9ನೇ ಗೇಟ್ ಬಳಿ ಶನಿವಾರ ನಡೆದಿದೆ. ಅಪಘಾತದಿಂದ ಆಟೊ ಚಾಲಕರೊಬ್ಬರು ಗಾಯಗೊಂಡಿದ್ದಾರೆ.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬನಶಂಕರಿ ನಡುವಿನ ಸಂಚರಿಸುವ ಬಸ್ ವೇಗವಾಗಿ ಬಂದು 9 ವಾಹಗಳಿಗೆ ಡಿಕ್ಕಿ ಹೊಡೆದಿದೆ.</p>.<p>ಬಸ್ ಚಾಲಕನಿಗೆ ದಿಢೀರನೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವಘಡ ಸಂಭವಿಸಿದೆ. ಬಸ್ ಜಪ್ತಿ ಮಾಡಲಾಗಿದೆ. ಚಾಲಕನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು.</p>.<p>ಕಬ್ಬನ್ಪಾರ್ಕ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>