‘ಗುರುವಾರ ರಾತ್ರಿ ಕೆಲಸ ಮುಗಿಸಿದ್ದ ಚೇತನ್, ಕಾಮಾಕ್ಷಿಪಾಳ್ಯ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಮನೆಯತ್ತ ಹೊರಟಿದ್ದರು. ಕೊಟಿಗೇಪಾಳ್ಯ ಮಾರ್ಗದ ಬಸ್ ಅದೇ ರಸ್ತೆಯಲ್ಲಿ ತೆರಳುತ್ತಿತ್ತು. ಚಾಲಕ ಅತೀ ವೇಗದಲ್ಲಿ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದ. ಇದರಿಂದಾಗಿ ಬಸ್, ಚೇತನ್ ಅವರಿಗೆ ಗುದ್ದಿತ್ತು’ ಎಂದು ತಿಳಿಸಿದರು.