ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ ಬಸ್ಸಿಗೆ ಕಲ್ಲು: ಚಾಲಕನ ತಲೆಗೆ ಪೆಟ್ಟು

Last Updated 18 ಏಪ್ರಿಲ್ 2021, 14:59 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್‌ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಚಾಲಕ ನಂಜುಂಡೇಗೌಡ (43) ತಲೆಗೆ ತೀವ್ರ ಪೆಟ್ಟು ಬಿದ್ದಿದೆ.

‘ಕಾಮಾಕ್ಷಿಪಾಳ್ಯದ ವಿಘ್ನೇಶ್ವರ್ ನಗರದ ಬಸ್‌ ತಂಗುದಾಣ ಬಳಿ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗಾಯಗೊಂಡಿರುವ ನಂಜುಂಡೇಗೌಡ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.

‘ಸಿಟಿ ಮಾರುಕಟ್ಟೆಯಿಂದ ಜಾಲಹಳ್ಳಿ ಕಡೆಗೆ (ನಂ. 248/6) ಬಿಎಂಟಿಸಿ ಬಸ್ ಹೊರಟಿತ್ತು. ಇದೇ ಸಂದರ್ಭದಲ್ಲೇ ಮೂವರು ದುಷ್ಕರ್ಮಿಗಳು, ಬಸ್ಸಿನ ಮುಂಭಾಗದ ಗಾಜಿಗೆ ಕಲ್ಲು ಹೊಡೆದಿದ್ದಾರೆ. ಒಂದು ಕಲ್ಲು ಚಾಲಕನ ತಲೆಗೆ ಬಿದ್ದಿದೆ’ ಎಂದೂ ತಿಳಿಸಿದರು.

‘ಕಲ್ಲು ತೂರಾಟದ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗಾಗಿ ಘಟನಾ ಸ್ಥಳದ ಸುತ್ತಮುತ್ತಲಿನ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT