<p><strong>ಬೆಂಗಳೂರು: </strong>ಯಲಹಂಕ–ನಾಗವಾರ ಮಾರ್ಗದಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಆಯೂಬ್ (35) ಎಂಬುವವರು ಮೃತಪಟ್ಟಿದ್ದಾರೆ.</p>.<p>ಸ್ಥಳದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ರಫಿಯುಲ್ಲಾ, ಮಸಾದ್ದೀಕ್, ಮುನ್ನಾವರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಭಾರತೀಯ ಟಿ.ಸಿ ಜಂಕ್ಷನ್ ಬಳಿ ನಿಂತಿದ್ದ ಕಾರು ಹಾಗೂ ಬೈಕ್ಗಳಿಗೆ ಹೆಗಡೆ ನಗರದ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಈ ಅವಘಡ ನಡೆದಿದೆ.</p>.<p>ಚಾಲಕನ ನಿಯಂತ್ರಣ ಕಳೆದುಕೊಂಡಿದ್ದ ಬಸ್ ಎರಡು ಕಾರು ಹಾಗೂ ಬೈಕ್ಗೆ ಡಿಕ್ಕಿಯಾಗಿದೆ.</p>.<p>ಈ ಅವಘಡಕ್ಕೆ ಬಸ್ನ ಬ್ರೇಕ್ ವಿಫಲವಾಗಿರುವುದು ಕಾರಣವೆಂದು ಹೇಳಲಾಗಿದೆ. ಚಿಕ್ಕಜಾಲ ಪೊಲೀಸರು ಬಸ್ ಚಾಲಕ ಗೋವಿಂದರಾಜು ಅವರನ್ನು ವಶಕ್ಕೆ ಪಡೆದಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಯಲಹಂಕ–ನಾಗವಾರ ಮಾರ್ಗದಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಆಯೂಬ್ (35) ಎಂಬುವವರು ಮೃತಪಟ್ಟಿದ್ದಾರೆ.</p>.<p>ಸ್ಥಳದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ರಫಿಯುಲ್ಲಾ, ಮಸಾದ್ದೀಕ್, ಮುನ್ನಾವರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಭಾರತೀಯ ಟಿ.ಸಿ ಜಂಕ್ಷನ್ ಬಳಿ ನಿಂತಿದ್ದ ಕಾರು ಹಾಗೂ ಬೈಕ್ಗಳಿಗೆ ಹೆಗಡೆ ನಗರದ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಈ ಅವಘಡ ನಡೆದಿದೆ.</p>.<p>ಚಾಲಕನ ನಿಯಂತ್ರಣ ಕಳೆದುಕೊಂಡಿದ್ದ ಬಸ್ ಎರಡು ಕಾರು ಹಾಗೂ ಬೈಕ್ಗೆ ಡಿಕ್ಕಿಯಾಗಿದೆ.</p>.<p>ಈ ಅವಘಡಕ್ಕೆ ಬಸ್ನ ಬ್ರೇಕ್ ವಿಫಲವಾಗಿರುವುದು ಕಾರಣವೆಂದು ಹೇಳಲಾಗಿದೆ. ಚಿಕ್ಕಜಾಲ ಪೊಲೀಸರು ಬಸ್ ಚಾಲಕ ಗೋವಿಂದರಾಜು ಅವರನ್ನು ವಶಕ್ಕೆ ಪಡೆದಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>