<p><strong>ಬೆಂಗಳೂರು:</strong> ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಘಟಕದ ವತಿಯಿಂದ ಚಲಿಸುತ್ತಿರುವ ಬಿಎಂಟಿಸಿ ಬಸ್ನಲ್ಲಿಯೇ ಕವಿಗೋಷ್ಠಿಯನ್ನು ಶನಿವಾರ ನಡೆಸಲಾಯಿತು. </p>.<p>ಈ ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ. ಪ್ರಕಾಶಮೂರ್ತಿ, ‘ಕಸಾಪ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಎಂಟಿಸಿ ಬಸ್ನಲ್ಲಿ ಸಾಹಿತ್ಯದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರಲ್ಲಿ ಸಾಹಿತ್ಯದ ಅಭಿರುಚಿ ಹೆಚ್ಚಿಸಲು ಇಂತಹ ಕಾರ್ಯಕ್ರಮಗಳು ನಡೆಯಬೇಕು’ ಎಂದು ಹೇಳಿದರು. </p>.<p>ಚಿಕ್ಕಬಾಣಾವರದ ಸಂತೇಬೀದಿಯ ಬಸ್ ನಿಲ್ದಾಣದಲ್ಲಿ ಕವಿಗೋಷ್ಠಿ ನಡೆಯುವ ಬಸ್ಗೆ ಚಾಲನೆ ನೀಡಲಾಯಿತು. ಕಸಾಪ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಘಟಕದ ಅಧ್ಯಕ್ಷ ಲಿಂಗರಾಜು ಎ. ಕಾಳೇನಹಳ್ಳಿ ಮೇಷ್ಟ್ರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ಎಂಟನೇ ಮೈಲಿ, ಜಾಲಹಳ್ಳಿ ಕ್ರಾಸ್, ಯಶವಂತಪುರ, ಮಲ್ಲೇಶ್ವರ, ನವರಂಗ, ನಂದಿನಿ ಬಡಾವಣೆ, ಹೆಗ್ಗನಹಳ್ಳಿ ಕ್ರಾಸ್, ರಾಜಗೋಪಾಲನಗರದಲ್ಲಿ ಸಂಚರಿಸಿದ ಬಸ್, ಚಿಕ್ಕಬಾಣಾವರಕ್ಕೆ ಮರಳಿತು. ವಿ.ಟಿ.ರಾಮಕೃಷ್ಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ 25ಕ್ಕೂ ಹೆಚ್ಚು ಕವಿಗಳು ಕವನ ವಾಚಿಸಿದರು. ಪ್ರಯಾಣಿಕರು ಕವಿತೆಗಳನ್ನು ಆಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಘಟಕದ ವತಿಯಿಂದ ಚಲಿಸುತ್ತಿರುವ ಬಿಎಂಟಿಸಿ ಬಸ್ನಲ್ಲಿಯೇ ಕವಿಗೋಷ್ಠಿಯನ್ನು ಶನಿವಾರ ನಡೆಸಲಾಯಿತು. </p>.<p>ಈ ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ. ಪ್ರಕಾಶಮೂರ್ತಿ, ‘ಕಸಾಪ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಎಂಟಿಸಿ ಬಸ್ನಲ್ಲಿ ಸಾಹಿತ್ಯದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರಲ್ಲಿ ಸಾಹಿತ್ಯದ ಅಭಿರುಚಿ ಹೆಚ್ಚಿಸಲು ಇಂತಹ ಕಾರ್ಯಕ್ರಮಗಳು ನಡೆಯಬೇಕು’ ಎಂದು ಹೇಳಿದರು. </p>.<p>ಚಿಕ್ಕಬಾಣಾವರದ ಸಂತೇಬೀದಿಯ ಬಸ್ ನಿಲ್ದಾಣದಲ್ಲಿ ಕವಿಗೋಷ್ಠಿ ನಡೆಯುವ ಬಸ್ಗೆ ಚಾಲನೆ ನೀಡಲಾಯಿತು. ಕಸಾಪ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಘಟಕದ ಅಧ್ಯಕ್ಷ ಲಿಂಗರಾಜು ಎ. ಕಾಳೇನಹಳ್ಳಿ ಮೇಷ್ಟ್ರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ಎಂಟನೇ ಮೈಲಿ, ಜಾಲಹಳ್ಳಿ ಕ್ರಾಸ್, ಯಶವಂತಪುರ, ಮಲ್ಲೇಶ್ವರ, ನವರಂಗ, ನಂದಿನಿ ಬಡಾವಣೆ, ಹೆಗ್ಗನಹಳ್ಳಿ ಕ್ರಾಸ್, ರಾಜಗೋಪಾಲನಗರದಲ್ಲಿ ಸಂಚರಿಸಿದ ಬಸ್, ಚಿಕ್ಕಬಾಣಾವರಕ್ಕೆ ಮರಳಿತು. ವಿ.ಟಿ.ರಾಮಕೃಷ್ಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ 25ಕ್ಕೂ ಹೆಚ್ಚು ಕವಿಗಳು ಕವನ ವಾಚಿಸಿದರು. ಪ್ರಯಾಣಿಕರು ಕವಿತೆಗಳನ್ನು ಆಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>