ಎಲ್ಲೆಂದರಲ್ಲಿ ಬಸ್ಗಳು ಕೆಟ್ಟು ನಿಲ್ಲುವುದು, ಪ್ರಯಾಣಿಕರೇ ಇಳಿದು ತಳ್ಳುವುದು ಸಾಮಾನ್ಯವಾಗಿದೆ. ‘ಒಂದು ವಾರದಲ್ಲೇ 56 ಬಸ್ಗಳು ರಸ್ತೆಯಲ್ಲಿ ಕೆಟ್ಟು ನಿಂತಿದ್ದವು. ಸಂಚಾರ ದಟ್ಟಣೆಗೆ ಈ ಬಸ್ಗಳೇ ಪ್ರಮುಖ ಕೊಡುಗೆ ನೀಡುತ್ತಿವೆ’ ಎಂಬ ಮಾಹಿತಿಯನ್ನು ಸಂಚಾರ ವಿಭಾಗದ ಜಂಟಿ ಕಮಿಷನರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಮುಂದೆಯೇ ಬಿಚ್ಚಿಟ್ಟಿದ್ದಾರೆ. ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.