ಸಾರ್ವಜನಿಕ ಸಾರಿಗೆ ತುಟ್ಟಿಯಾಗಿದ್ದು, ಬಡವರು, ಮಧ್ಯಮ ವರ್ಗದ ಜನರು ದ್ವಿಚಕ್ರ, ಖಾಸಗಿ ವಾಹನಗಳನ್ನು ಅಧಿಕ ಸಂಖ್ಯೆಯಲ್ಲಿ ಬಳಸುತ್ತಿದ್ದಾರೆ. ಇದರಿಂದ ನಗರದಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ದಿನದಿಂದ ದಿನಕ್ಕೆ ವಾಯುಮಾಲಿನ್ಯ ಏರಿಕೆಯಾಗುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾರ್ವಜನಿಕ ಸಾರಿಗೆ ಬಳಕೆಯನ್ನು ಉತ್ತೇಜಿಸಬೇಕಾಗಿದ್ದು, ಅದಕ್ಕಾಗಿ ಬಸ್ ಪ್ರಯಾಣ ದರ ಇಳಿಕೆ ಮಾಡಲು ಸರ್ಕಾರ ನಿರ್ಧರಿಸಿದೆ.