ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ: ನಾಳೆಯಿಂದ 'ವಾಯುವಜ್ರ' ಬಸ್ ಸೇವೆ

Last Updated 5 ಸೆಪ್ಟೆಂಬರ್ 2020, 17:48 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‍ಡೌನ್ ತೆರವಾಗಿರುವುದರಿಂದ ನಗರದಲ್ಲಿ ಬಿಎಂಟಿಸಿ ವಜ್ರ ಹಾಗೂ ವಾಯುವಜ್ರ ಹವಾನಿಯಂತ್ರಿತ ಬಸ್‍ಗಳ ಕಾರ್ಯಾಚರಣೆ ಸೆ.7ರಿಂದ ಪುನರಾರಂಭಗೊಳ್ಳಲಿದೆ.

ಕೊರೊನಾ ಕಾರಣಕ್ಕೆ ಸಂಸ್ಥೆಯು ಹವಾನಿಯಂತ್ರಿತ ಬಸ್‍ಗಳ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಈಗ ಕೊರೊನಾ ನಿಯಂತ್ರಣಕ್ಕೆ ಬಂದಿರುವುದರಿಂದ ಸರ್ಕಾರ ಸೂಚಿಸಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಬಸ್‍ಗಳು ಕಾರ್ಯಾಚರಣೆ ನಡೆಸಲಿವೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊಸಕೋಟೆ, ಅತ್ತಿಬೆಲೆ, ಕಾಡುಗೋಡಿ, ಬನಶಂಕರಿ, ಹೆಬ್ಬಾಳ, ಸಿಲ್ಕ್ ಬೋರ್ಡ್, ಐಟಿಪಿಎಲ್ ಹಾಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗಗಳಲ್ಲಿ ಬಸ್ ಸೇವೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT