ಬಿಎಂಟಿಸಿ: ನಾಳೆಯಿಂದ 'ವಾಯುವಜ್ರ' ಬಸ್ ಸೇವೆ
ಬೆಂಗಳೂರು: ಲಾಕ್ಡೌನ್ ತೆರವಾಗಿರುವುದರಿಂದ ನಗರದಲ್ಲಿ ಬಿಎಂಟಿಸಿ ವಜ್ರ ಹಾಗೂ ವಾಯುವಜ್ರ ಹವಾನಿಯಂತ್ರಿತ ಬಸ್ಗಳ ಕಾರ್ಯಾಚರಣೆ ಸೆ.7ರಿಂದ ಪುನರಾರಂಭಗೊಳ್ಳಲಿದೆ.
ಕೊರೊನಾ ಕಾರಣಕ್ಕೆ ಸಂಸ್ಥೆಯು ಹವಾನಿಯಂತ್ರಿತ ಬಸ್ಗಳ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಈಗ ಕೊರೊನಾ ನಿಯಂತ್ರಣಕ್ಕೆ ಬಂದಿರುವುದರಿಂದ ಸರ್ಕಾರ ಸೂಚಿಸಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಬಸ್ಗಳು ಕಾರ್ಯಾಚರಣೆ ನಡೆಸಲಿವೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊಸಕೋಟೆ, ಅತ್ತಿಬೆಲೆ, ಕಾಡುಗೋಡಿ, ಬನಶಂಕರಿ, ಹೆಬ್ಬಾಳ, ಸಿಲ್ಕ್ ಬೋರ್ಡ್, ಐಟಿಪಿಎಲ್ ಹಾಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗಗಳಲ್ಲಿ ಬಸ್ ಸೇವೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.