'ವೃದ್ಧೆ ನಿಂಗಮ್ಮ ಅವರ ಮೊದಲ ಮಗ ತೀರಿಕೊಂಡಿದ್ದು, ಅವರ ಸೊಸೆ ಲತಾ ಬೆಂಗಳೂರಿಗೆ ಬಂದು ವಾಸವಿದ್ದರು. ಪಿಂಚಣಿ ತರಲು ವೃದ್ಧೆ ನಿಂಗಮ್ಮ, ತುಮಕೂರಿನಿಂದ ಬೆಂಗಳೂರಿಗೆ ಇತ್ತೀಚೆಗೆ ಬಂದಿದ್ದರು. ಅದೇ ಸಂದರ್ಭದಲ್ಲೇ ಸೊಸೆ ಜೊತೆ ಜಗಳವಾಗಿತ್ತು. ವೃದ್ಧೆಗೆ ಸೊಸೆ ಹೊಡೆದಿದ್ದರು. ಆಗ ವೃದ್ಧೆ ಮೃತಪಟ್ಟಿದ್ದರು. ನಂತರ, ಮೃತದೇಹವನ್ನು ಆರೋಪಿ ಬಾಲಚಂದ್ರ ರೈಲ್ವೆ ಹಳಿ ಮೇಲೆ ಎಸೆದಿದ್ದ. ನಂತರ, ರೈಲು ಹರಿದು ಬೇರ್ಪಟ್ಟ ರುಂಡವನ್ನು ನೆಲಮಂಗಲ ಬಳಿ ಲಾರಿಯಲ್ಲಿ ಹಾಕಿದ್ದ. ಅದೇ ಲಾರಿ ಇಳಕಲ್ಗರ ಹೋಗಿತ್ತು' ಎಂದೂ ಭಾಸ್ಕರ್ ರಾವ್ ಹೇಳಿದರು.