<p><strong>ಬೆಂಗಳೂರು</strong>: ಬನಶಂಕರಿ ಸಮೀಪದ ಕದಿರೇನಹಳ್ಳಿ ಕ್ರಾಸ್ನಲ್ಲಿ ಬಿಎಂಟಿಸಿ ಬಸ್ವೊಂದನ್ನು ಅಡ್ಡಗಟ್ಟಿ, ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಕುಮಾರಸ್ವಾಮಿ ಲೇಔಟ್ನ ಸಿದ್ದ ಅಪ್ಪಾಜಿ (28) ಬಂಧಿತ.</p>.<p>ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಸಿದ್ದ ಅಪ್ಪಾಜಿ ಸೇರಿದಂತೆ ನಾಲ್ವರು ಗುರುವಾರ ಮಧ್ಯಾಹ್ನ ಎರಡು ಬೈಕ್ಗಳಲ್ಲಿ ಕದಿರೇನಹಳ್ಳಿ ಕ್ರಾಸ್ನ ಏಕಮುಖ ಸಂಚಾರ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದರು. ಆ ಮಾರ್ಗವಾಗಿ ಬಿಎಂಟಿಸಿ ಬಸ್ ಚಲಿಸುತ್ತಿತ್ತು. ಬಿಎಂಟಿಸಿ ಚಾಲಕ ಹುಚ್ಚಿರಪ್ಪ ಅವರು ಬೈಕ್ ಸವಾರರಿಗೆ ಬುದ್ಧಿಮಾತು ಹೇಳಿದ್ದರು. ಇದರಿಂದ ಕೆರಳಿದ ಆರೋಪಿಗಳು, ಚಾಲಕನ ಜತೆಗೆ ವಾಗ್ವಾದ ನಡೆಸಿದ್ದರು. ಚಾಲಕನಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದರು. ಇದು ಬಸ್ನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.</p>.<p>ಗಲಾಟೆ ವಿಕೋಪಕ್ಕೆ ಹೋದ ಮೇಲೆ ನಿರ್ವಾಹಕ ಪ್ರಕಾಶ್ ಅವರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದರು. ಅದಾದ ಮೇಲೆ ಆರೋಪಿಗಳು ಪರಾರಿ ಆಗಿದ್ದರು.</p>.<p>‘ಆರೋಪಿಗಳ ಬೈಕ್ನ ನೋಂದಣಿ ಸಂಖ್ಯೆ ಆಧರಿಸಿ ಸಿದ್ದ ಅಪ್ಪಾಜಿಯನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಇತರೆ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ’ ಎಂದು ಬನಶಂಕರಿ ಠಾಣೆಯ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬನಶಂಕರಿ ಸಮೀಪದ ಕದಿರೇನಹಳ್ಳಿ ಕ್ರಾಸ್ನಲ್ಲಿ ಬಿಎಂಟಿಸಿ ಬಸ್ವೊಂದನ್ನು ಅಡ್ಡಗಟ್ಟಿ, ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಕುಮಾರಸ್ವಾಮಿ ಲೇಔಟ್ನ ಸಿದ್ದ ಅಪ್ಪಾಜಿ (28) ಬಂಧಿತ.</p>.<p>ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಸಿದ್ದ ಅಪ್ಪಾಜಿ ಸೇರಿದಂತೆ ನಾಲ್ವರು ಗುರುವಾರ ಮಧ್ಯಾಹ್ನ ಎರಡು ಬೈಕ್ಗಳಲ್ಲಿ ಕದಿರೇನಹಳ್ಳಿ ಕ್ರಾಸ್ನ ಏಕಮುಖ ಸಂಚಾರ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದರು. ಆ ಮಾರ್ಗವಾಗಿ ಬಿಎಂಟಿಸಿ ಬಸ್ ಚಲಿಸುತ್ತಿತ್ತು. ಬಿಎಂಟಿಸಿ ಚಾಲಕ ಹುಚ್ಚಿರಪ್ಪ ಅವರು ಬೈಕ್ ಸವಾರರಿಗೆ ಬುದ್ಧಿಮಾತು ಹೇಳಿದ್ದರು. ಇದರಿಂದ ಕೆರಳಿದ ಆರೋಪಿಗಳು, ಚಾಲಕನ ಜತೆಗೆ ವಾಗ್ವಾದ ನಡೆಸಿದ್ದರು. ಚಾಲಕನಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದರು. ಇದು ಬಸ್ನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.</p>.<p>ಗಲಾಟೆ ವಿಕೋಪಕ್ಕೆ ಹೋದ ಮೇಲೆ ನಿರ್ವಾಹಕ ಪ್ರಕಾಶ್ ಅವರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದರು. ಅದಾದ ಮೇಲೆ ಆರೋಪಿಗಳು ಪರಾರಿ ಆಗಿದ್ದರು.</p>.<p>‘ಆರೋಪಿಗಳ ಬೈಕ್ನ ನೋಂದಣಿ ಸಂಖ್ಯೆ ಆಧರಿಸಿ ಸಿದ್ದ ಅಪ್ಪಾಜಿಯನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಇತರೆ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ’ ಎಂದು ಬನಶಂಕರಿ ಠಾಣೆಯ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>