‘ನಾಗೇಂದ್ರ ವಿರುದ್ಧವೇ ತಿರುಗಿಬಿದ್ದಿದ್ದ ಆರೋಪಿಗಳು, ‘ಇದು ನಮ್ಮ ಪ್ರದೇಶದ ನಿಲ್ದಾಣ. ಅದನ್ನು ಕೇಳಲು ನೀನು ಯಾರು?’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಮಾತಿಗೆ ಮಾತು ಬೆಳೆದು, ಜಗಳ ಶುರುವಾಗಿತ್ತು. ಆರೋಪಿ ನಂದ, ಚಾಲಕ ನಾಗೇಂದ್ರ ಅವರ ಮುಖಕ್ಕೆ ಗುದ್ದಿ ಹಲ್ಲೆ ಮಾಡಿದ್ದ. ನಂತರ, ಸಮೀಪದಲ್ಲಿದ್ದ ಎಳನೀರು ಅಂಗಡಿಯಿಂದ ಮಚ್ಚು ತಂದು ನಾಗೇಂದ್ರ ಮೇಲೆ ಬೀಸಲು ಮುಂದಾಗಿದ್ದ. ನಾಗೇಂದ್ರ ತಮ್ಮ ಕೈ ಅಡ್ಡ ಹಿಡಿದಿದ್ದರು. ಇದರಿಂದಾಗಿ ಕೈ ಹೆಬ್ಬೆರಳಿಗೆ ಮಚ್ಚಿನೇಟು ಬಿದ್ದಿತ್ತು’ ಎಂದು ಪೊಲೀಸರು ಹೇಳಿದರು.