<p><strong>ಬೆಂಗಳೂರು</strong>: ಕುಮಾರಸ್ವಾಮಿ ಲೇಔಟ್ ನಿಲ್ದಾಣದಲ್ಲಿ ರಾತ್ರಿ ತಂಗಿದ್ದ BMTC ಬಸ್ನ ಚಾಲಕನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿದ್ದು, ಕೃತ್ಯ ಎಸಗಿದ್ದ ಆರೋಪಿ ನಂದ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಏಪ್ರಿಲ್ 4ರಂದು ತಡರಾತ್ರಿ ನಡೆದಿದ್ದ ಹಲ್ಲೆ ಬಗ್ಗೆ ಚಾಲಕ ನಾಗೇಂದ್ರ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು, ಆರೋಪಿ ನಂದನನ್ನು ಬಂಧಿಸಲಾಗಿದೆ. ಇನ್ನೊಬ್ಬ ಆರೋಪಿ ಜಾನ್ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<p>‘ಮಾರ್ಗ ಸಂಖ್ಯೆ 15ಇ/2ರ ಎಲೆಕ್ಟ್ರಿಕ್ ಬಸ್ನಲ್ಲಿ ಏಪ್ರಿಲ್ 4ರಂದು ಚಾಲಕ ನಾಗೇಂದ್ರ ಕರ್ತವ್ಯದಲ್ಲಿದ್ದರು. ತಡರಾತ್ರಿ ಕರ್ತವ್ಯದ ಅವಧಿ ಮುಗಿದಿದ್ದರಿಂದ, ಕುಮಾರಸ್ವಾಮಿ ಲೇಔಟ್ ನಿಲ್ದಾಣದಲ್ಲಿ ಬಸ್ ಸಮೇತ ತಂಗಿದ್ದರು. ಬಸ್ನಲ್ಲಿಯೇ ಚಾಲಕ ಹಾಗೂ ನಿರ್ವಾಹಕ ಮಲಗಿದ್ದರು’ ಎಂದು ತಿಳಿಸಿದರು.</p>.<p>‘ಪಾನಮತ್ತರಾಗಿದ್ದ ನಂದ ಹಾಗೂ ಸ್ನೇಹಿತರು ನಿಲ್ದಾಣಕ್ಕೆ ತಡರಾತ್ರಿ ಬಂದಿದ್ದರು. ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಳ್ಳುತ್ತಿದ್ದರು. ಅದನ್ನು ಕೇಳಿಸಿಕೊಂಡಿದ್ದ ಚಾಲಕ ನಾಗೇಂದ್ರ, ಎಚ್ಚರಗೊಂಡು ಬಸ್ನಿಂದ ಇಳಿದು ಆರೋಪಿಗಳ ಬಳಿ ಹೋಗಿದ್ದರು. ‘ನಿಲ್ದಾಣದಲ್ಲಿ ಗಲಾಟೆ ಮಾಡಬೇಡಿ. ಹೊರಟು ಹೋಗಿ’ ಎಂದು ಕೋರಿದ್ದರು.’</p>.<p>‘ನಾಗೇಂದ್ರ ವಿರುದ್ಧವೇ ತಿರುಗಿಬಿದ್ದಿದ್ದ ಆರೋಪಿಗಳು, ‘ಇದು ನಮ್ಮ ಪ್ರದೇಶದ ನಿಲ್ದಾಣ. ಅದನ್ನು ಕೇಳಲು ನೀನು ಯಾರು?’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಮಾತಿಗೆ ಮಾತು ಬೆಳೆದು, ಜಗಳ ಶುರುವಾಗಿತ್ತು. ಆರೋಪಿ ನಂದ, ಚಾಲಕ ನಾಗೇಂದ್ರ ಅವರ ಮುಖಕ್ಕೆ ಗುದ್ದಿ ಹಲ್ಲೆ ಮಾಡಿದ್ದ. ನಂತರ, ಸಮೀಪದಲ್ಲಿದ್ದ ಎಳನೀರು ಅಂಗಡಿಯಿಂದ ಮಚ್ಚು ತಂದು ನಾಗೇಂದ್ರ ಮೇಲೆ ಬೀಸಲು ಮುಂದಾಗಿದ್ದ. ನಾಗೇಂದ್ರ ತಮ್ಮ ಕೈ ಅಡ್ಡ ಹಿಡಿದಿದ್ದರು. ಇದರಿಂದಾಗಿ ಕೈ ಹೆಬ್ಬೆರಳಿಗೆ ಮಚ್ಚಿನೇಟು ಬಿದ್ದಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಚಾಲಕನ ರಕ್ಷಣೆಗೆ ಹೋಗಿದ್ದ ನಿರ್ವಾಹಕನಿಗೂ ಮಚ್ಚು ತೋರಿಸಿ ಆರೋಪಿಗಳು ಬೆದರಿಸಿದ್ದರು. ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ತಪ್ಪಿಸಿಕೊಂಡಿದ್ದರು. ನಾಗೇಂದ್ರ ಅವರನ್ನು ನಿರ್ವಾಹಕನೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ನಾಗೇಂದ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ’ ಎಂದು ತಿಳಿಸಿದರು.</p>.<p><strong>ಅಪರಾಧ ಹಿನ್ನೆಲೆಯುಳ್ಳವ</strong></p><p>‘ನಂದನ ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ಆದರೆ, ತಲೆಮರೆಸಿಕೊಂಡಿರುವ ಜಾನ್ ಅಪರಾಧ ಹಿನ್ನೆಲೆಯುಳ್ಳವ. ಈತನ ಮೇಲೆ ಈ ಹಿಂದೆಯೂ ಪ್ರಕರಣ ದಾಖಲಾಗಿತ್ತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕುಮಾರಸ್ವಾಮಿ ಲೇಔಟ್ ನಿಲ್ದಾಣದಲ್ಲಿ ರಾತ್ರಿ ತಂಗಿದ್ದ BMTC ಬಸ್ನ ಚಾಲಕನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿದ್ದು, ಕೃತ್ಯ ಎಸಗಿದ್ದ ಆರೋಪಿ ನಂದ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಏಪ್ರಿಲ್ 4ರಂದು ತಡರಾತ್ರಿ ನಡೆದಿದ್ದ ಹಲ್ಲೆ ಬಗ್ಗೆ ಚಾಲಕ ನಾಗೇಂದ್ರ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು, ಆರೋಪಿ ನಂದನನ್ನು ಬಂಧಿಸಲಾಗಿದೆ. ಇನ್ನೊಬ್ಬ ಆರೋಪಿ ಜಾನ್ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<p>‘ಮಾರ್ಗ ಸಂಖ್ಯೆ 15ಇ/2ರ ಎಲೆಕ್ಟ್ರಿಕ್ ಬಸ್ನಲ್ಲಿ ಏಪ್ರಿಲ್ 4ರಂದು ಚಾಲಕ ನಾಗೇಂದ್ರ ಕರ್ತವ್ಯದಲ್ಲಿದ್ದರು. ತಡರಾತ್ರಿ ಕರ್ತವ್ಯದ ಅವಧಿ ಮುಗಿದಿದ್ದರಿಂದ, ಕುಮಾರಸ್ವಾಮಿ ಲೇಔಟ್ ನಿಲ್ದಾಣದಲ್ಲಿ ಬಸ್ ಸಮೇತ ತಂಗಿದ್ದರು. ಬಸ್ನಲ್ಲಿಯೇ ಚಾಲಕ ಹಾಗೂ ನಿರ್ವಾಹಕ ಮಲಗಿದ್ದರು’ ಎಂದು ತಿಳಿಸಿದರು.</p>.<p>‘ಪಾನಮತ್ತರಾಗಿದ್ದ ನಂದ ಹಾಗೂ ಸ್ನೇಹಿತರು ನಿಲ್ದಾಣಕ್ಕೆ ತಡರಾತ್ರಿ ಬಂದಿದ್ದರು. ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಳ್ಳುತ್ತಿದ್ದರು. ಅದನ್ನು ಕೇಳಿಸಿಕೊಂಡಿದ್ದ ಚಾಲಕ ನಾಗೇಂದ್ರ, ಎಚ್ಚರಗೊಂಡು ಬಸ್ನಿಂದ ಇಳಿದು ಆರೋಪಿಗಳ ಬಳಿ ಹೋಗಿದ್ದರು. ‘ನಿಲ್ದಾಣದಲ್ಲಿ ಗಲಾಟೆ ಮಾಡಬೇಡಿ. ಹೊರಟು ಹೋಗಿ’ ಎಂದು ಕೋರಿದ್ದರು.’</p>.<p>‘ನಾಗೇಂದ್ರ ವಿರುದ್ಧವೇ ತಿರುಗಿಬಿದ್ದಿದ್ದ ಆರೋಪಿಗಳು, ‘ಇದು ನಮ್ಮ ಪ್ರದೇಶದ ನಿಲ್ದಾಣ. ಅದನ್ನು ಕೇಳಲು ನೀನು ಯಾರು?’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಮಾತಿಗೆ ಮಾತು ಬೆಳೆದು, ಜಗಳ ಶುರುವಾಗಿತ್ತು. ಆರೋಪಿ ನಂದ, ಚಾಲಕ ನಾಗೇಂದ್ರ ಅವರ ಮುಖಕ್ಕೆ ಗುದ್ದಿ ಹಲ್ಲೆ ಮಾಡಿದ್ದ. ನಂತರ, ಸಮೀಪದಲ್ಲಿದ್ದ ಎಳನೀರು ಅಂಗಡಿಯಿಂದ ಮಚ್ಚು ತಂದು ನಾಗೇಂದ್ರ ಮೇಲೆ ಬೀಸಲು ಮುಂದಾಗಿದ್ದ. ನಾಗೇಂದ್ರ ತಮ್ಮ ಕೈ ಅಡ್ಡ ಹಿಡಿದಿದ್ದರು. ಇದರಿಂದಾಗಿ ಕೈ ಹೆಬ್ಬೆರಳಿಗೆ ಮಚ್ಚಿನೇಟು ಬಿದ್ದಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಚಾಲಕನ ರಕ್ಷಣೆಗೆ ಹೋಗಿದ್ದ ನಿರ್ವಾಹಕನಿಗೂ ಮಚ್ಚು ತೋರಿಸಿ ಆರೋಪಿಗಳು ಬೆದರಿಸಿದ್ದರು. ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ತಪ್ಪಿಸಿಕೊಂಡಿದ್ದರು. ನಾಗೇಂದ್ರ ಅವರನ್ನು ನಿರ್ವಾಹಕನೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ನಾಗೇಂದ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ’ ಎಂದು ತಿಳಿಸಿದರು.</p>.<p><strong>ಅಪರಾಧ ಹಿನ್ನೆಲೆಯುಳ್ಳವ</strong></p><p>‘ನಂದನ ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ಆದರೆ, ತಲೆಮರೆಸಿಕೊಂಡಿರುವ ಜಾನ್ ಅಪರಾಧ ಹಿನ್ನೆಲೆಯುಳ್ಳವ. ಈತನ ಮೇಲೆ ಈ ಹಿಂದೆಯೂ ಪ್ರಕರಣ ದಾಖಲಾಗಿತ್ತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>