‘10 ವರ್ಷಗಳಿಂದ ಚಾಲಕ ನಾಗಿರುವ ಸದೆಪ್ಪ,ಎಂ.ಎಸ್.ಪಾಳ್ಯ ಡಿಪೊದಲ್ಲಿ ಕೆಲಸ ಮಾಡುತ್ತಿದ್ದಾರೆ. ಶನಿವಾರ ಬೆಳಿಗ್ಗೆ ವಿದ್ಯಾರಣ್ಯಪುರದಿಂದ ಮೆಜೆಸ್ಟಿಕ್ ಬಸ್ ನಿಲ್ದಾಣದತ್ತ ಬಸ್ ಚಲಾಯಿಸಿಕೊಂಡು ಹೊರಟಿದ್ದರು. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಮಾರ್ಗಮಧ್ಯೆ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸಿ, ರಸ್ತೆ ಪಕ್ಕದಲ್ಲಿದ್ದ ವಾಹನಗಳಿಗೆ ಗುದ್ದಿಸಿದ್ದರು. ಕೆಲ ವಾಹನಗಳು ಜಖಂಗೊಂಡವು’ ಎಂದು ಪೊಲೀಸರು ಮಾಹಿತಿ ನೀಡಿದರು.