<p><strong>ಬೆಂಗಳೂರು</strong>: ಮಹಾಲಕ್ಷ್ಮಿ ಲೇಔಟ್ನ ಕಂಠೀರವ ಸ್ಟುಡಿಯೊ ರಸ್ತೆಯಲ್ಲಿ ಬಿಎಂಟಿಸಿ ಚಾಲಕರಿಬ್ಬರು ಬಸ್ ಅನ್ನು ನಡುರಸ್ತೆಯಲ್ಲೇ ನಿಲುಗಡೆ ಮಾಡಿ, ಗಲಾಟೆ ಮಾಡಿಕೊಂಡಿದ್ದಾರೆ.</p>.<p>ವಿದ್ಯುತ್ ಚಾಲಿತ ಬಸ್ ಚಾಲಕರ ನಡುವೆ ಗಲಾಟೆ ಆಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಗಲಾಟೆ ಬಿಡಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಮುಂದೆ ಸಾಗಲು ಅವಕಾಶ ನೀಡಲಿಲ್ಲ ಎನ್ನುವ ವಿಚಾರಕ್ಕೆ ಚಾಲಕರು ಗಲಾಟೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ಚಾಲಕರು ಪರಸ್ಪರ ಆರೋಪ–ಪ್ರತ್ಯಾರೋಪ ಮಾಡಿಕೊಳ್ಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಸ್ನಲ್ಲಿದ್ದ ಪ್ರಯಾಣಿಕರು, ಗಲಾಟೆಯ ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.</p>.<p>‘ಒಂದು ಬಸ್, ಮತ್ತೊಂದು ಬಸ್ಗೆ ತಾಗಿತು ಎನ್ನುವ ವಿಚಾರಕ್ಕೆ ಗಲಾಟೆ ಆಗಿದೆ. ಹಲವು ಬಾರಿ ಮನವಿ ಮಾಡಿದರೂ ಚಾಲಕರು ಗಲಾಟೆ ಮುಂದುವರಿಸಿದ್ದರು. ಇದರಿಂದ ಶಾಲೆಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುವ ಉದ್ಯೋಗಸ್ಥರಿಗೆ ತೊಂದರೆಯಾಯಿತು’ ಎಂದು ಪ್ರಯಾಣಿಕರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಹಾಲಕ್ಷ್ಮಿ ಲೇಔಟ್ನ ಕಂಠೀರವ ಸ್ಟುಡಿಯೊ ರಸ್ತೆಯಲ್ಲಿ ಬಿಎಂಟಿಸಿ ಚಾಲಕರಿಬ್ಬರು ಬಸ್ ಅನ್ನು ನಡುರಸ್ತೆಯಲ್ಲೇ ನಿಲುಗಡೆ ಮಾಡಿ, ಗಲಾಟೆ ಮಾಡಿಕೊಂಡಿದ್ದಾರೆ.</p>.<p>ವಿದ್ಯುತ್ ಚಾಲಿತ ಬಸ್ ಚಾಲಕರ ನಡುವೆ ಗಲಾಟೆ ಆಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಗಲಾಟೆ ಬಿಡಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಮುಂದೆ ಸಾಗಲು ಅವಕಾಶ ನೀಡಲಿಲ್ಲ ಎನ್ನುವ ವಿಚಾರಕ್ಕೆ ಚಾಲಕರು ಗಲಾಟೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ಚಾಲಕರು ಪರಸ್ಪರ ಆರೋಪ–ಪ್ರತ್ಯಾರೋಪ ಮಾಡಿಕೊಳ್ಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಸ್ನಲ್ಲಿದ್ದ ಪ್ರಯಾಣಿಕರು, ಗಲಾಟೆಯ ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.</p>.<p>‘ಒಂದು ಬಸ್, ಮತ್ತೊಂದು ಬಸ್ಗೆ ತಾಗಿತು ಎನ್ನುವ ವಿಚಾರಕ್ಕೆ ಗಲಾಟೆ ಆಗಿದೆ. ಹಲವು ಬಾರಿ ಮನವಿ ಮಾಡಿದರೂ ಚಾಲಕರು ಗಲಾಟೆ ಮುಂದುವರಿಸಿದ್ದರು. ಇದರಿಂದ ಶಾಲೆಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುವ ಉದ್ಯೋಗಸ್ಥರಿಗೆ ತೊಂದರೆಯಾಯಿತು’ ಎಂದು ಪ್ರಯಾಣಿಕರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>