ಬೆಂಗಳೂರು: ಅರಣ್ಯ ನಾಶ ಮತ್ತು ಮಣ್ಣಿನ ಸವಕಳಿಯಿಂದ ಹವಾಮಾನ ವೈಪರೀತ್ಯದಂತಹ ಪರಿಸರ ವಿಕೋಪಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಬಿಎಂಟಿಸಿ ಸಂಸ್ಥೆ ಉಪಾಧ್ಯಕ್ಷ ಎಂ.ಆರ್.ವೆಂಕಟೇಶ್ ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ‘ಒಂದು ಬಸ್ ಒಂದು ಗಿಡ’ ಎಂಬ ಪರಿಕಲ್ಪನೆಯೊಂದಿಗೆ ಬಿಎಂಟಿಸಿ ಸಂಸ್ಥೆಯ ಎಲ್ಲಾ ಘಟಕಗಳಲ್ಲಿ ಹಾಗೂ ಸಂಸ್ಥೆಯ ಎಲ್ಲಾ ಸ್ಥಳಗಳಲ್ಲಿ ಸುಮಾರು 7000 ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.