ಮಧ್ಯಾಹ್ನ 12ಕ್ಕೆ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ಬಸ್ನಿಲ್ದಾಣದಿಂದ ಬಸ್ ಹೊರಡಲಿದೆ. ಭೋಗ ನಂದೀಶ್ವರ ದೇವಸ್ಥಾನ, ಕಣಿವೆ ಬಸವಣ್ಣ ದೇವಸ್ಥಾನ, ಸರ್.ಎಂ. ವಿಶ್ವೇಶ್ವರಯ್ಯ ಮ್ಯೂಸಿಯಂ ಮತ್ತು ಸಮಾಧಿ, ರಂಗಸ್ಥಳ ರಂಗನಾಥ ಸ್ವಾಮಿ ದೇವಸ್ಥಾನ ಮತ್ತು ಈಶ ಫೌಂಡೇಷನ್ಗೆ ಭೇಟಿ ರಾತ್ರಿ 9.30ಕ್ಕೆ ಮತ್ತೆ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ಬಸ್ನಿಲ್ದಾಣಕ್ಕೆ ತಲುಪಲಿದೆ. ಪ್ರಯಾಣ ದರ ಒಬ್ಬರಿಗೆ ₹ 500 ನಿಗದಿ ಮಾಡಲಾಗಿದೆ ಎಂದು ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.