<p>ಬೆಂಗಳೂರು: ಬಿಎಂಟಿಸಿ ವತಿಯಿಂದ ಘಟಕ–8 ಯಶವಂತಪುರದಲ್ಲಿ ಶನಿವಾರ ರಾಷ್ಟ್ರೀಯ ಚಾಲಕರ ದಿನ ಆಚರಿಸಲಾಯಿತು.</p>.<p>ಸಂಸ್ಥೆಯ ಅಧ್ಯಕ್ಷ ವಿ.ಎಸ್. ಆರಾಧ್ಯ ಮಾತನಾಡಿ, ‘ದೇಶದಲ್ಲಿ ಮಾದರಿ ಮಹಾನಗರ ಸಾರಿಗೆ ಸಂಸ್ಥೆಯಾಗಿ ಬಿಎಂಟಿಸಿ ಗುರುತಿಸಿಕೊಂಡಿರುವುದು ಚಾಲಕರು ಹಾಗೂ ನಿರ್ವಾಹಕರ ಶಿಸ್ತು, ನಿಷ್ಠೆ ಮತ್ತು ಪ್ರಾಮಾಣಿಕ ಸೇವೆಯ ಫಲವಾಗಿದೆ. ನಮ್ಮ ಬಸ್ಗಳ ಅಪಘಾತ ಪ್ರಮಾಣವೂ ಕಡಿಮೆಯಾಗಿದೆ’ ಎಂದು ಶ್ಲಾಘಿಸಿದರು.</p>.<p>ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಕೆ.ಬಿ, ಮುಖ್ಯ ಸಂಚಾರ ವ್ಯವಸ್ಥಾಪಕ ಜಿ.ಟಿ. ಪ್ರಭಾಕರ ರೆಡ್ಡಿ, ಉತ್ತರ ವಲಯ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಎಸ್.ಆರ್. ಉಪಸ್ಥಿತರಿದ್ದರು.</p>.<p>ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ ಚಾಲಕ ಲೋಕೇಶ್ ಸಿ. ಅವರು ಸುರಕ್ಷಿತ ಚಾಲನೆಯ ಬಗ್ಗೆ ತನ್ನ ಅನುಭವ ಹಂಚಿಕೊಂಡರು. ಎಲ್ಲ ಚಾಲಕರು ಹಾಗೂ ಚಾಲಕ–ನಿರ್ವಾಹಕರಿಗೆ ಹೂಗುಚ್ಛ ಮತ್ತು ಸಿಹಿ ಹಂಚಿ ಶುಭಕೋರಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಿಎಂಟಿಸಿ ವತಿಯಿಂದ ಘಟಕ–8 ಯಶವಂತಪುರದಲ್ಲಿ ಶನಿವಾರ ರಾಷ್ಟ್ರೀಯ ಚಾಲಕರ ದಿನ ಆಚರಿಸಲಾಯಿತು.</p>.<p>ಸಂಸ್ಥೆಯ ಅಧ್ಯಕ್ಷ ವಿ.ಎಸ್. ಆರಾಧ್ಯ ಮಾತನಾಡಿ, ‘ದೇಶದಲ್ಲಿ ಮಾದರಿ ಮಹಾನಗರ ಸಾರಿಗೆ ಸಂಸ್ಥೆಯಾಗಿ ಬಿಎಂಟಿಸಿ ಗುರುತಿಸಿಕೊಂಡಿರುವುದು ಚಾಲಕರು ಹಾಗೂ ನಿರ್ವಾಹಕರ ಶಿಸ್ತು, ನಿಷ್ಠೆ ಮತ್ತು ಪ್ರಾಮಾಣಿಕ ಸೇವೆಯ ಫಲವಾಗಿದೆ. ನಮ್ಮ ಬಸ್ಗಳ ಅಪಘಾತ ಪ್ರಮಾಣವೂ ಕಡಿಮೆಯಾಗಿದೆ’ ಎಂದು ಶ್ಲಾಘಿಸಿದರು.</p>.<p>ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಕೆ.ಬಿ, ಮುಖ್ಯ ಸಂಚಾರ ವ್ಯವಸ್ಥಾಪಕ ಜಿ.ಟಿ. ಪ್ರಭಾಕರ ರೆಡ್ಡಿ, ಉತ್ತರ ವಲಯ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಎಸ್.ಆರ್. ಉಪಸ್ಥಿತರಿದ್ದರು.</p>.<p>ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ ಚಾಲಕ ಲೋಕೇಶ್ ಸಿ. ಅವರು ಸುರಕ್ಷಿತ ಚಾಲನೆಯ ಬಗ್ಗೆ ತನ್ನ ಅನುಭವ ಹಂಚಿಕೊಂಡರು. ಎಲ್ಲ ಚಾಲಕರು ಹಾಗೂ ಚಾಲಕ–ನಿರ್ವಾಹಕರಿಗೆ ಹೂಗುಚ್ಛ ಮತ್ತು ಸಿಹಿ ಹಂಚಿ ಶುಭಕೋರಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>