‘ತಿಪ್ಪಸಂದ್ರದಿಂದ ಮಾರ್ಕೇಟ್ಗೆ ಹೋಗುವ ಮಾರ್ಗದಲ್ಲಿ ಸೋಮವಾರ ಹೆಚ್ಚಿನ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಮೂಲಕ ಸಂಸ್ಥೆಯ ನಿಯಮ ಉಲ್ಲಂಘಿಸಿದ್ದೀರಿ. ಕರ್ತವ್ಯದಲ್ಲಿ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ ವಹಿಸಿರುವ ನೀವು ಮೂರು ದಿನಗಳಲ್ಲಿ ಸಮಜಾಯಷಿ ನೀಡಬೇಕು. ಇಲ್ಲದಿದ್ದರೆ ಏಕಪಕ್ಷೀಯ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಬಿಎಂಟಿಸಿ ಅಂಜನಾಪುರ ಘಟಕ ವ್ಯವಸ್ಥಾಪಕರು ಎಚ್ಚರಿಕೆ ನೀಡಿದ್ದಾರೆ.