<p><strong>ಬೆಂಗಳೂರು:</strong> ‘ನವ ಭಾರತದ ಭವಿಷ್ಯ ಯುವ ಜನತೆಯ ಕೈನಲ್ಲಿದ್ದು, ಪರಿಶ್ರಮವೇ ಯಶಸ್ಸಿನ ಕೀಲಿಯಾಗಿದೆ’ ಎಂದು ಲೈಟ್ ಕ್ಯಾಸ್ಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕಿ ಸರಸ್ವತಿ ರಾಮಚಂದ್ರ ಹೇಳಿದರು.</p>.<p>ಬಿಎನ್ಎಂಐಟಿ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದರು.</p>.<p>‘ಪದವಿ ಪಡೆದ ವಿದ್ಯಾರ್ಥಿಗಳಿಗೆ ಇಂದು ಸಂಭ್ರಮದ ದಿನವಾಗಿದೆ. ಆದರೆ, ನಾಳೆಯಿಂದ ನಿಮ್ಮ ಜವಾಬ್ದಾರಿ ಆರಂಭವಾಗುತ್ತದೆ. ಸ್ಪರ್ಧಾತ್ಮಕ ಜಗತ್ತಿಗೆ ನೀವು ಕಾಲು ಇಡುತ್ತಿದ್ದೀರಿ, ಹೊಸ ತಂತ್ರಜ್ಞಾನ ಮತ್ತು ಅನ್ವೇಷಣೆಗಳ ಕಡೆ ಹೆಚ್ಚಿನ ಗಮನ ನೀಡಿ’ ಎಂದು ಸಲಹೆ ಹೇಳಿದರು.</p>.<p>‘ವಿದ್ಯಾರ್ಥಿಗಳು ದೊಡ್ಡ ದೊಡ್ಡ ಕನಸುಗಳನ್ನು ಕಾಣಬೇಕು. ಜತೆಗೆ ಅವುಗಳನ್ನು ಸಕಾರಗೊಳಿಸಲು ಶ್ರದ್ಧೆ ಮತ್ತು ಕಠಿಣ ಪರಿಶ್ರಮ ಹಾಕಬೇಕು’ ಎಂದರು.</p>.<p>ಎಂಬಿಎ ವಿಭಾಗದಲ್ಲಿ 10 ಚಿನ್ನದ ಪದಕಗಳನ್ನು ನೀಡಲಾಯಿತು. ಎಂಟೆಕ್ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದುಕೊಂಡರು.</p>.<p>‘ವಿದ್ಯಾರ್ಥಿಗಳು ಜೀವನದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿ. ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ. ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವಂತೆ ಎತ್ತರಕ್ಕೆ ಬೆಳೆಯಬೇಕು’ ಎಂದು ಬಿಎನ್ಎಂ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ನಾರಾಯಣ ರಾವ್ ಆರ್. ಮಾನೆ ಹೇಳಿದರು.</p>.<p>ಬಿಎನ್ಎಂಐಟಿ ಜಂಟಿ ಕಾರ್ಯದರ್ಶಿ ಅಶೋಕ್ ಆರ್. ಮಾನೆ, ಕಾಲೇಜಿನ ಹೆಚ್ಚುವರಿ ನಿರ್ದೇಶಕ ಡಾ. ಎಸ್.ವೈ. ಕುಲಕರ್ಣಿ, ನಿರ್ದೇಶಕ ಪ್ರೊ.ಟಿ.ಜೆ ರಾಮಮೂರ್ತಿ, ಟ್ರಸ್ಟಿ ಈಶ್ವರ್ ಎನ್. ಮಾನೆ, ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎನ್.ಕೃಷ್ಣಮೂರ್ತಿ, ಡಾ.ಕೆ. ವೆಂಕಟೇಶ್, ಡಾ. ಜಿ.ಎನ್. ಕೇಶವ ಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನವ ಭಾರತದ ಭವಿಷ್ಯ ಯುವ ಜನತೆಯ ಕೈನಲ್ಲಿದ್ದು, ಪರಿಶ್ರಮವೇ ಯಶಸ್ಸಿನ ಕೀಲಿಯಾಗಿದೆ’ ಎಂದು ಲೈಟ್ ಕ್ಯಾಸ್ಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕಿ ಸರಸ್ವತಿ ರಾಮಚಂದ್ರ ಹೇಳಿದರು.</p>.<p>ಬಿಎನ್ಎಂಐಟಿ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದರು.</p>.<p>‘ಪದವಿ ಪಡೆದ ವಿದ್ಯಾರ್ಥಿಗಳಿಗೆ ಇಂದು ಸಂಭ್ರಮದ ದಿನವಾಗಿದೆ. ಆದರೆ, ನಾಳೆಯಿಂದ ನಿಮ್ಮ ಜವಾಬ್ದಾರಿ ಆರಂಭವಾಗುತ್ತದೆ. ಸ್ಪರ್ಧಾತ್ಮಕ ಜಗತ್ತಿಗೆ ನೀವು ಕಾಲು ಇಡುತ್ತಿದ್ದೀರಿ, ಹೊಸ ತಂತ್ರಜ್ಞಾನ ಮತ್ತು ಅನ್ವೇಷಣೆಗಳ ಕಡೆ ಹೆಚ್ಚಿನ ಗಮನ ನೀಡಿ’ ಎಂದು ಸಲಹೆ ಹೇಳಿದರು.</p>.<p>‘ವಿದ್ಯಾರ್ಥಿಗಳು ದೊಡ್ಡ ದೊಡ್ಡ ಕನಸುಗಳನ್ನು ಕಾಣಬೇಕು. ಜತೆಗೆ ಅವುಗಳನ್ನು ಸಕಾರಗೊಳಿಸಲು ಶ್ರದ್ಧೆ ಮತ್ತು ಕಠಿಣ ಪರಿಶ್ರಮ ಹಾಕಬೇಕು’ ಎಂದರು.</p>.<p>ಎಂಬಿಎ ವಿಭಾಗದಲ್ಲಿ 10 ಚಿನ್ನದ ಪದಕಗಳನ್ನು ನೀಡಲಾಯಿತು. ಎಂಟೆಕ್ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದುಕೊಂಡರು.</p>.<p>‘ವಿದ್ಯಾರ್ಥಿಗಳು ಜೀವನದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿ. ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ. ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವಂತೆ ಎತ್ತರಕ್ಕೆ ಬೆಳೆಯಬೇಕು’ ಎಂದು ಬಿಎನ್ಎಂ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ನಾರಾಯಣ ರಾವ್ ಆರ್. ಮಾನೆ ಹೇಳಿದರು.</p>.<p>ಬಿಎನ್ಎಂಐಟಿ ಜಂಟಿ ಕಾರ್ಯದರ್ಶಿ ಅಶೋಕ್ ಆರ್. ಮಾನೆ, ಕಾಲೇಜಿನ ಹೆಚ್ಚುವರಿ ನಿರ್ದೇಶಕ ಡಾ. ಎಸ್.ವೈ. ಕುಲಕರ್ಣಿ, ನಿರ್ದೇಶಕ ಪ್ರೊ.ಟಿ.ಜೆ ರಾಮಮೂರ್ತಿ, ಟ್ರಸ್ಟಿ ಈಶ್ವರ್ ಎನ್. ಮಾನೆ, ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎನ್.ಕೃಷ್ಣಮೂರ್ತಿ, ಡಾ.ಕೆ. ವೆಂಕಟೇಶ್, ಡಾ. ಜಿ.ಎನ್. ಕೇಶವ ಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>