‘ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಸದಸ್ಯರಾಗಿದ್ದ ಈ ಅಪರಾಧಿಗಳು, ದೆಹಲಿಯ ಜಾಮೀಯಾನಗರದ ಮನೆಯೊಂದರಲ್ಲಿ ವಾಸವಿದ್ದುಕೊಂಡು ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದರು. ಪ್ರತ್ಯೇಕ ತಂಡಗಳಾಗಿ ಬೆಂಗಳೂರಿಗೆ ಬಂದಿದ್ದ ಅಪರಾಧಿಗಳು, ಚಿನ್ನಸ್ವಾಮಿ ಕ್ರೀಡಾಂಗಣ ಬಳಿಯೇ ನಾಲ್ಕು ಕಡೆ ಬಾಂಬ್ ಇಟ್ಟಿದ್ದರು. ಅದರಲ್ಲಿ ಒಂದು ಬಾಂಬ್ ಸ್ಫೋಟಗೊಂಡಿತ್ತು. ಉಳಿದ ಮೂರು ಬಾಂಬ್ಗಳನ್ನು ಪೊಲೀಸರೇ ಪತ್ತೆ ಮಾಡಿ ನಿಷ್ಕ್ರಿಯಗೊಳಿಸಿದ್ದರು’ ಎಂದರು.