ಬೆಂಗಳೂರು: ಬೆಂಗಳೂರಿನ ಶಾಲೆಗಳ ಬಾಂಬ್ ಬೆದರಿಕೆ ಬಗ್ಗೆ ಆತಂಕಪಡಬೇಕಾಗಿಲ್ಲ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲಿಂದ ಕರೆ ಬಂದಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ಪೋಷಕರು ಆತಂಕಪಡಬೇಕಾಗಿಲ್ಲ. ರಾಜ್ಯಕ್ಕೆ ಕೆಟ್ಟ ಹೆಸರು ತರಬೇಕು ಎಂಬ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.