ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಜಖಂ: ಕಿಡಿಗೇಡಿಗಳ ಕೃತ್ಯ ಶಂಕೆ

Last Updated 20 ಜೂನ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಮನೆಯ ಬಳಿ ನಿಲ್ಲಿಸಿದ್ದ ಮೂರು ಕಾರುಗಳನ್ನು ಕಿಡಿಗೇಡಿಗಳು ಜಖಂಗೊಳಿಸಿರುವ ಘಟನೆ ಹೊಸೂರು ರಸ್ತೆ ಬಂಡೇಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಮಹದೇವಯ್ಯ ಎಂಬುವವರಿಗೆ ಸೇರಿದ ಮೂರು ಕಾರುಗಳನ್ನು ಜಖಂಗೊಳಿಸಲಾಗಿದೆ. ರಾತ್ರಿ 11 ಗಂಟೆಗೆ ಕೆಲಸ ಮುಗಿಸಿ ಮನೆಯ ಪಕ್ಕದ ರಸ್ತೆ ಬದಿಯಲ್ಲಿ ಕಾರುಗಳನ್ನು ನಿಲ್ಲಿಸಿ ಹೋದ ನಂತರ ಈ ಕೃತ್ಯ ಎಸಗಲಾಗಿದೆ. ಬಂಡೇಪಾಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.

‘ನಾವು ಕೆಲಸ ಮುಗಿಸಿ ಮನೆಯ ಹತ್ತಿರವೇ ಕಾರು ನಿಲ್ಲಿಸಿ ಮನೆಗೆ ತೆರಳಿದ್ದೆವು. ಬೆಳಿಗ್ಗೆ 7 ಗಂಟೆಗೆ ಬಂದು ನೋಡಿದಾಗ ಕಾರುಗಳು ಜಖಂಗೊಂಡಿದ್ದವು. ಸ್ಥಳೀಯರೇ ಈ ಕೃತ್ಯ ಮಾಡಿರುವ ಅನುಮಾನವಿದೆ. ಅವರನ್ನು ಪತ್ತೆ ಹಚ್ಚಿ ಆಗಿರುವ ನಷ್ಟವನ್ನು ಭರಿಸಿಕೊಡಬೇಕು’ ಎಂದು ಮಹದೇವಯ್ಯ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT