ಕಾರ್ಮಿಕರಿಗಾಗಿ ಇರುವ 44 ಕಾನೂನುಗಳನ್ನು ನಾಲ್ಕು ಸಂಹಿತೆಗಳಾಗಿ ಬದಲಾಯಿಸಲು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಇದು ಭಾರತದ ಕಾರ್ಮಿಕ ವರ್ಗಕ್ಕೆ ಮರಣ ಶಾಸನವಾಗಲಿದೆ ಎಂದರು. ದೇಶದ ಸಂಪತ್ತು ಕೆಲವೇ ವ್ಯಕ್ತಿಗಳ ಕೈಯಲ್ಲಿ ಶೇಖರಣೆ ಆಗುತ್ತಿರುವುದರಿಂದ ಆರ್ಥಿಕತೆ ನಿಂತ ನೀರಾಗಲಿದ್ದು, ಅರ್ಥವ್ಯವಸ್ಥೆಯನ್ನು ಪ್ರಪಾತಕ್ಕೆ ತಳ್ಳಲಿದೆ ಎಂದು ವಿಶ್ಲೇಷಿಸಿದರು. ಸರ್ಕಾರದ ಈ ನಡೆಯನ್ನು ವಿರೋಧಿಸಿ ಹಲವು ಜನ ಆರ್ಥಿಕ ತಜ್ಞರು ರಾಜೀನಾಮೆ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.