<p><strong>ಬೊಮ್ಮನಹಳ್ಳಿ:</strong> ಬಿಬಿಎಂಪಿ ಅಧಿಕಾರಿಗಳು ಬೊಮ್ಮನಹಳ್ಳಿ ವಲಯದ 16 ವಾರ್ಡುಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಜಪ್ತಿ ಮಾಡುವ ಕಾರ್ಯವನ್ನು ಮಂಗಳವಾರ ನಡೆಸಿದರು.</p>.<p>ಬೊಮ್ಮನಹಳ್ಳಿಯ ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ ಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಹಾಗು ಸಿಬ್ಬಂದಿ ಪ್ಲಾಸ್ಟಿಕ್ ವಸ್ತುಗಳಿದ್ದ ಅಂಗಡಿಗಳಿಗೆ ದಾಳಿ ನಡೆಸಿ ವಶಕ್ಕೆ ಪಡೆಯುವ ಜತೆಗೆ ಸ್ಥಳದಲ್ಲೇ ₹22 ಸಾವಿರ ದಂಡವನ್ನೂ ವಿಧಿಸಿದರು. ಕೆಲ ಅಂಗಡಿಗಳ ಬಾಗಿಲು ಮುಚ್ಚಿಸಿದರು.</p>.<p class="Subhead">ಪಿಜಿ ಕಟ್ಟಡದಲ್ಲಿ ಕೊಳೆತ ಆಹಾರ: ಪಿಜಿ ಕಟ್ಟಡವೊಂದರಲ್ಲಿ ಕೊಳೆತ ಆಹಾರವನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಡಲಾಗಿತ್ತು. ಊಟದ ಹಾಲ್ನಲ್ಲೇ ಇಡಲಾಗಿದ್ದ ಚೀಲಗಳಿಂದ ಗಬ್ಬು ವಾಸನೆ ಬೀರುತ್ತಿದ್ದರೂ, ಅದನ್ನು ವಿಲೇವಾರಿ ಮಾಡಿರಲಿಲ್ಲ. ಕಾರಣ ಕೇಳಿದ್ದಕ್ಕೆ ಪಿಜಿ ಕಟ್ಟಡದ ಮಾಲೀಕರಿಂದ ಮೌನವೇ ಉತ್ತರವಾಗಿತ್ತು. ಇದರಿಂದ ಕುಪಿತಗೊಂಡ ಪಾಲಿಕೆಯ ಜಂಟಿ ಆಯುಕ್ತೆ ಸೌಜನ್ಯಾ ₹10 ಸಾವಿರ ದಂಡ ವಿಧಿಸಿದರು.</p>.<p>ತಳ್ಳು ಗಾಡಿಯಲ್ಲಿ ಹೂವು ಮಾರಾಟ ಮಾಡುತ್ತಿದ್ದ ವ್ಯಾಪಾರಿಯೊಬ್ಬ ಪೇಪರ್ ಚೀಲ ಬಳಸುತ್ತಿದ್ದುದನ್ನು ಕಂಡು ಶಾಸಕ ಸತೀಶ್ ರೆಡ್ಡಿ ಹೂವಿನ ಹಾರ ಹಾಕಿ ಸನ್ಮಾನಿಸಿದರು.</p>.<p>‘ತಮಿಳುನಾಡಿನಲ್ಲಿ ಪ್ಲಾಸ್ಟಿಕ್ ನಿಷೇಧ ಅಭಿಯಾನ ಯಶಸ್ವಿಯಾಗಿದೆ. ನಮ್ಮಲ್ಲಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಪಾಲಿಕೆಯ ಜತೆ ಸಹಕರಿಸುತ್ತಿಲ್ಲ. ಎಚ್ಚರಿಕೆಯ ನಂತರವೂ ಪ್ಲಾಸ್ಟಿಕ್ ಬಳಸಿದ್ದಲ್ಲಿ ₹2.5 ಲಕ್ಷವರೆಗೆ ದಂಡ ವಿಧಿಸಲು ಅವಕಾಶವಿದ್ದು, ಅದನ್ನು ಪಾಲಿಸಬೇಕಾಗುತ್ತದೆ. ಜತೆಗೆ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನಾ ಘಟಕಗಳ ಮೇಲೂ ದಾಳಿ ನಡೆಸುತ್ತೇವೆ’ ಎಂದು ಸೌಜನ್ಯಾ ತಿಳಿಸಿದರು.</p>.<p>‘ಮೂರು ವರ್ಷಗಳಿಂದ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಲು ಪ್ರಯತ್ನಿಸಿದರೂ ನಿರೀಕ್ಷಿತ ಫಲ ಸಿಕ್ಕಿಲ್ಲ. ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಸತೀಶ್ ರೆಡ್ಡಿ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಮ್ಮನಹಳ್ಳಿ:</strong> ಬಿಬಿಎಂಪಿ ಅಧಿಕಾರಿಗಳು ಬೊಮ್ಮನಹಳ್ಳಿ ವಲಯದ 16 ವಾರ್ಡುಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಜಪ್ತಿ ಮಾಡುವ ಕಾರ್ಯವನ್ನು ಮಂಗಳವಾರ ನಡೆಸಿದರು.</p>.<p>ಬೊಮ್ಮನಹಳ್ಳಿಯ ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ ಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಹಾಗು ಸಿಬ್ಬಂದಿ ಪ್ಲಾಸ್ಟಿಕ್ ವಸ್ತುಗಳಿದ್ದ ಅಂಗಡಿಗಳಿಗೆ ದಾಳಿ ನಡೆಸಿ ವಶಕ್ಕೆ ಪಡೆಯುವ ಜತೆಗೆ ಸ್ಥಳದಲ್ಲೇ ₹22 ಸಾವಿರ ದಂಡವನ್ನೂ ವಿಧಿಸಿದರು. ಕೆಲ ಅಂಗಡಿಗಳ ಬಾಗಿಲು ಮುಚ್ಚಿಸಿದರು.</p>.<p class="Subhead">ಪಿಜಿ ಕಟ್ಟಡದಲ್ಲಿ ಕೊಳೆತ ಆಹಾರ: ಪಿಜಿ ಕಟ್ಟಡವೊಂದರಲ್ಲಿ ಕೊಳೆತ ಆಹಾರವನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಡಲಾಗಿತ್ತು. ಊಟದ ಹಾಲ್ನಲ್ಲೇ ಇಡಲಾಗಿದ್ದ ಚೀಲಗಳಿಂದ ಗಬ್ಬು ವಾಸನೆ ಬೀರುತ್ತಿದ್ದರೂ, ಅದನ್ನು ವಿಲೇವಾರಿ ಮಾಡಿರಲಿಲ್ಲ. ಕಾರಣ ಕೇಳಿದ್ದಕ್ಕೆ ಪಿಜಿ ಕಟ್ಟಡದ ಮಾಲೀಕರಿಂದ ಮೌನವೇ ಉತ್ತರವಾಗಿತ್ತು. ಇದರಿಂದ ಕುಪಿತಗೊಂಡ ಪಾಲಿಕೆಯ ಜಂಟಿ ಆಯುಕ್ತೆ ಸೌಜನ್ಯಾ ₹10 ಸಾವಿರ ದಂಡ ವಿಧಿಸಿದರು.</p>.<p>ತಳ್ಳು ಗಾಡಿಯಲ್ಲಿ ಹೂವು ಮಾರಾಟ ಮಾಡುತ್ತಿದ್ದ ವ್ಯಾಪಾರಿಯೊಬ್ಬ ಪೇಪರ್ ಚೀಲ ಬಳಸುತ್ತಿದ್ದುದನ್ನು ಕಂಡು ಶಾಸಕ ಸತೀಶ್ ರೆಡ್ಡಿ ಹೂವಿನ ಹಾರ ಹಾಕಿ ಸನ್ಮಾನಿಸಿದರು.</p>.<p>‘ತಮಿಳುನಾಡಿನಲ್ಲಿ ಪ್ಲಾಸ್ಟಿಕ್ ನಿಷೇಧ ಅಭಿಯಾನ ಯಶಸ್ವಿಯಾಗಿದೆ. ನಮ್ಮಲ್ಲಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಪಾಲಿಕೆಯ ಜತೆ ಸಹಕರಿಸುತ್ತಿಲ್ಲ. ಎಚ್ಚರಿಕೆಯ ನಂತರವೂ ಪ್ಲಾಸ್ಟಿಕ್ ಬಳಸಿದ್ದಲ್ಲಿ ₹2.5 ಲಕ್ಷವರೆಗೆ ದಂಡ ವಿಧಿಸಲು ಅವಕಾಶವಿದ್ದು, ಅದನ್ನು ಪಾಲಿಸಬೇಕಾಗುತ್ತದೆ. ಜತೆಗೆ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನಾ ಘಟಕಗಳ ಮೇಲೂ ದಾಳಿ ನಡೆಸುತ್ತೇವೆ’ ಎಂದು ಸೌಜನ್ಯಾ ತಿಳಿಸಿದರು.</p>.<p>‘ಮೂರು ವರ್ಷಗಳಿಂದ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಲು ಪ್ರಯತ್ನಿಸಿದರೂ ನಿರೀಕ್ಷಿತ ಫಲ ಸಿಕ್ಕಿಲ್ಲ. ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಸತೀಶ್ ರೆಡ್ಡಿ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>