ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸಾಜ್ ನೆಪದಲ್ಲಿ ಚಿನ್ನಾಭರಣ ಕದ್ದೊಯ್ದ

Last Updated 11 ಜನವರಿ 2020, 22:24 IST
ಅಕ್ಷರ ಗಾತ್ರ

ಬೆಂಗಳೂರು: ದೇಹಕ್ಕೆ ಎಣ್ಣೆ ಮಸಾಜ್ ಮಾಡುವ ನೆಪದಲ್ಲಿ ಮನೆಗೆ ಬಂದಿದ್ದ ಅಪರಿಚಿತನೊಬ್ಬ ಚಿನ್ನಾಭರಣ ಕದ್ದುಕೊಂಡು ಹೋಗಿದ್ದು, ಈ ಸಂಬಂಧ ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಇದೇ 7ರಂದು ಮಧ್ಯಾಹ್ನ ನಡೆದಿರುವ ಘಟನೆ ಸಂಬಂಧ ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮಸಾಜ್‌ ಮಾಡುವ ವೇಳೆ ಚಿನ್ನಾಭರಣ ಧರಿಸಬಾರದೆಂದು ಹೇಳಿದ್ದ ಆರೋಪಿ, ಅವುಗಳನ್ನು ಬಿಚ್ಚಿಸಿ ಪಕ್ಕದಲ್ಲೇ ಇಟ್ಟುಕೊಂಡಿದ್ದ. ನಿವಾಸಿಯು ಮಸಾಜ್ ಬಳಿಕ ವಿಶ್ರಾಂತಿ ಪಡೆಯುತ್ತಿದ್ದಾಗಲೇ ಆರೋಪಿ, ₹37 ಸಾವಿರ ಮೌಲ್ಯದ ಚಿನ್ನಾಭರಣ ಕದ್ದುಕೊಂಡು ಹೋಗಿದ್ದಾನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT