ಬೊಮ್ಮನಹಳ್ಳಿ: ಬೇಗೂರಿನ ಇತಿಹಾಸ ಪ್ರಸಿದ್ಧ ನಾಗನಾಥೇಶ್ವರ ದೇವಸ್ಥಾನದಲ್ಲಿ ಕಾರ್ತೀಕ ಮಾಸದ ಅಂಗವಾಗಿ ಲಕ್ಷದೀಪೋತ್ಸವ ಸೋಮವಾರ ನಡೆಯಿತು.
ಬೆಳಿಗ್ಗೆ 10ಕ್ಕೆ ಪೂಜಾ ಕೈಂಕರ್ಯಗಳು ಪ್ರಾರಂಭವಾದವು. ಸಂಜೆ 7 ಗಂಟೆಗೆ ದೇವಾಲಯದ ಮಧ್ಯಭಾಗದಲ್ಲಿರುವ ಗರುಡಗಂಬಕ್ಕೆ ದೀಪ ಹಚ್ಚುವ ಮೂಲಕ ಲಕ್ಷದೀಪೋತ್ಸವಕ್ಕೆ ಚಾಲನೆ ನೀಡಲಾಯಿತು. ಅನ್ನದ ರಾಶಿಗೆ ಪೂಜೆ ಸಲ್ಲಿಸಿದ ಬಳಿಕ ಸುಮಾರು 50ಸಾವಿರ ಮಂದಿ ಅನ್ನ ಸಂತರ್ಪಣೆಯಲ್ಲಿ ಪ್ರಸಾದ ಸ್ವೀಕರಿಸಿದರು.