<p><strong>ಬೆಂಗಳೂರು:</strong> ಕ್ರೈಸ್ಟ್ ಕಾಲೇಜಿನ ವಿದ್ಯಾರ್ಥಿಗಳು ಶನಿವಾರ ಬನ್ನೇರುಘಟ್ಟ ರಸ್ತೆಯ ಅರಕೆರೆಯ ಕೆರೆ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಜತೆ ಕೈಜೋಡಿಸಿದರು. ಉಪನ್ಯಾಸಕರ ಜತೆ ಬಂದಿದ್ದ 200 ವಿದ್ಯಾರ್ಥಿಗಳು ಮುಖಗವಸು, ಕೈಗವಸು ತೊಟ್ಟು ಕೆರೆಯಲ್ಲಿ ಬೆಳೆದಿದ್ದ ಜೊಂಡು, ಪಾರ್ಥೇನಿಯಂ ಗಿಡಗಳನ್ನು ಕೀಳುವಲ್ಲಿ ಮಗ್ನರಾದರು.</p>.<p>ಪಾಲಿಕೆ ಸದಸ್ಯೆ ಭಾಗ್ಯಲಕ್ಷ್ಮೀ ಮುರಳಿ, ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಕುಮಾರ್, ಸ್ಥಳೀಯ ಬಿಜೆಪಿ ಮುಖಂಡ ಮುರಳಿ ಹಾಗೂ ಸ್ಥಳೀಯರು ವಿದ್ಯಾರ್ಥಿಗಳೊಂದಿಗೆ ಸ್ವಚ್ಛತೆಯಲ್ಲಿ ತೊಡಗಿದರು.</p>.<p>500 ವರ್ಷಗಳ ಇತಿಹಾಸವಿರುವ 45 ಎಕರೆ ವಿಸ್ತೀರ್ಣದ ಕೆರೆ ಒತ್ತುವರಿ ಆಗಿ 37 ಎಕರೆ ಉಳಿದಿದೆ. ಬನ್ನೇರುಘಟ್ಟ ರಸ್ತೆಗೆ ಹೊಂದಿಕೊಂಡ 8 ಎಕರೆ ಕೆರೆ ಜಾಗವನ್ನು ಒತ್ತುವರಿ ಮಾಡಲಾಗಿದೆ. ಈ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.ಕೈಗಾರಿಕೆಗಳ ತ್ಯಾಜ್ಯ ನೀರು ಮತ್ತು ಪಕ್ಕದ ಲೇಔಟ್ ಗಳ ಚರಂಡಿ ನೀರು ಸೇರಿ ಕೆರೆ ಸಂಪೂರ್ಣವಾಗಿ ಕಲುಷಿತಗೊಂಡಿದೆ.</p>.<p>ಈ ವೇಳೆ ಪ್ರತಿಕ್ರಿಯಿಸಿದ ಪಾಲಿಕೆ ಸದಸ್ಯೆ ಭಾಗ್ಯಲಕ್ಷ್ಮಿ ಮುರಳಿ, ‘ಕೆರೆ ಸ್ವಚ್ಛತೆ ಸಂಬಂಧಿಸಿ ಕೌನ್ಸಿಲ್ ಸಭೆಗಳಲ್ಲಿ ಪ್ರಸ್ತಾಪಿಸಿದ್ದೇನೆ. ಆದರೆ ಯಾವುದೇ ಅನುದಾನ ನೀಡುತ್ತಿಲ್ಲ. ಅಧಿಕಾರಿಗಳ ಅಸಹಕಾರದಿಂದ ಕೆರೆ ಸಂರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಇದಕ್ಕೂ ಮೊದಲು ವಿದ್ಯಾರ್ಥಿಗಳು ಕೆರೆ ಸಂರಕ್ಷಣೆ ಕುರಿತು ಬೀದಿ ನಾಟಕ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕ್ರೈಸ್ಟ್ ಕಾಲೇಜಿನ ವಿದ್ಯಾರ್ಥಿಗಳು ಶನಿವಾರ ಬನ್ನೇರುಘಟ್ಟ ರಸ್ತೆಯ ಅರಕೆರೆಯ ಕೆರೆ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಜತೆ ಕೈಜೋಡಿಸಿದರು. ಉಪನ್ಯಾಸಕರ ಜತೆ ಬಂದಿದ್ದ 200 ವಿದ್ಯಾರ್ಥಿಗಳು ಮುಖಗವಸು, ಕೈಗವಸು ತೊಟ್ಟು ಕೆರೆಯಲ್ಲಿ ಬೆಳೆದಿದ್ದ ಜೊಂಡು, ಪಾರ್ಥೇನಿಯಂ ಗಿಡಗಳನ್ನು ಕೀಳುವಲ್ಲಿ ಮಗ್ನರಾದರು.</p>.<p>ಪಾಲಿಕೆ ಸದಸ್ಯೆ ಭಾಗ್ಯಲಕ್ಷ್ಮೀ ಮುರಳಿ, ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಕುಮಾರ್, ಸ್ಥಳೀಯ ಬಿಜೆಪಿ ಮುಖಂಡ ಮುರಳಿ ಹಾಗೂ ಸ್ಥಳೀಯರು ವಿದ್ಯಾರ್ಥಿಗಳೊಂದಿಗೆ ಸ್ವಚ್ಛತೆಯಲ್ಲಿ ತೊಡಗಿದರು.</p>.<p>500 ವರ್ಷಗಳ ಇತಿಹಾಸವಿರುವ 45 ಎಕರೆ ವಿಸ್ತೀರ್ಣದ ಕೆರೆ ಒತ್ತುವರಿ ಆಗಿ 37 ಎಕರೆ ಉಳಿದಿದೆ. ಬನ್ನೇರುಘಟ್ಟ ರಸ್ತೆಗೆ ಹೊಂದಿಕೊಂಡ 8 ಎಕರೆ ಕೆರೆ ಜಾಗವನ್ನು ಒತ್ತುವರಿ ಮಾಡಲಾಗಿದೆ. ಈ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.ಕೈಗಾರಿಕೆಗಳ ತ್ಯಾಜ್ಯ ನೀರು ಮತ್ತು ಪಕ್ಕದ ಲೇಔಟ್ ಗಳ ಚರಂಡಿ ನೀರು ಸೇರಿ ಕೆರೆ ಸಂಪೂರ್ಣವಾಗಿ ಕಲುಷಿತಗೊಂಡಿದೆ.</p>.<p>ಈ ವೇಳೆ ಪ್ರತಿಕ್ರಿಯಿಸಿದ ಪಾಲಿಕೆ ಸದಸ್ಯೆ ಭಾಗ್ಯಲಕ್ಷ್ಮಿ ಮುರಳಿ, ‘ಕೆರೆ ಸ್ವಚ್ಛತೆ ಸಂಬಂಧಿಸಿ ಕೌನ್ಸಿಲ್ ಸಭೆಗಳಲ್ಲಿ ಪ್ರಸ್ತಾಪಿಸಿದ್ದೇನೆ. ಆದರೆ ಯಾವುದೇ ಅನುದಾನ ನೀಡುತ್ತಿಲ್ಲ. ಅಧಿಕಾರಿಗಳ ಅಸಹಕಾರದಿಂದ ಕೆರೆ ಸಂರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಇದಕ್ಕೂ ಮೊದಲು ವಿದ್ಯಾರ್ಥಿಗಳು ಕೆರೆ ಸಂರಕ್ಷಣೆ ಕುರಿತು ಬೀದಿ ನಾಟಕ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>