<p><strong>ಬೊಮ್ಮನಹಳ್ಳಿ:</strong> ಶಾಸಕ ಸತೀಶ್ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದೆ, ರೆಡ್ಡಿ ಸಮುದಾಯಕ್ಕೆ ತಾರತಮ್ಯ ಮಾಡಲಾಗಿದೆ ಎಂದು ಖಂಡಿಸಿ, ಕರ್ನಾಟಕ ರೆಡ್ಡಿ ಜನ ಸಂಘದ ಸದಸ್ಯರು ಕೋರಮಂಗಲದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಮೆರವಣಿಗೆ ಮೂಲಕ ಸರ್ಜಾಪುರ ರಸ್ತೆಯ ವಾಟರ್ ಟ್ಯಾಂಕ್ ಬಸ್ ನಿಲ್ದಾಣದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ರೆಡ್ಡಿ ಸಮುದಾಯದವರು,ಶಾಸಕ ಸತೀಶ್ ರೆಡ್ಡಿ ಪರ ಘೋಷಣೆ ಕೂಗಿದರು.</p>.<p>‘ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ರೆಡ್ಡಿ ಸಮುದಾಯಕ್ಕೆ ಅನ್ಯಾಯವಾಗಿದೆ. ರಾಜ್ಯದ ದೊಡ್ಡ ಸಮುದಾಯವೊಂದನ್ನು ಕಡೆಗಣಿಸಿರುವುದು ಸರಿಯಲ್ಲ. ಮೂರು ಬಾರಿ ಶಾಸಕರಾಗಿರುವ ಸತೀಶ್ ರೆಡ್ಡಿಯವರಿಗೆ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಎರೆಹೊಸಹಳ್ಳಿಯ ವೇಮನಾನಂದ ಸ್ವಾಮೀಜಿ,‘ಪ್ರಬಲ ರೆಡ್ಡಿ ಸಮುದಾಯವನ್ನು ಕಡೆಗಣಿಸಿರುವುದು ಅಕ್ಷಮ್ಯ. ಹಿಂದಿನ ಸಿದ್ದರಾಮಯ್ಯ ಸಂಪುಟದಲ್ಲಿ ನಾಲ್ವರು ಸಮುದಾಯವನ್ನು ಪ್ರತಿನಿಧಿಸಿದ್ದರು. ಕೇವಲ ಒಂದು ಸಮುದಾಯದ ಓಲೈಕೆಗೆ ನಿಂತಿರುವ ಬಿಜೆಪಿಯ ನಡೆಯೇ ಮುಂದಿನ ದಿನಗಳಲ್ಲಿ ಮುಳುವಾಗಿ ಪರಿಣಮಿಸಲಿದೆ’ ಎಂದರು.</p>.<p>ಸ್ಥಳೀಯ ಮುಖಂಡ ಎಸ್.ಕೆ.ನಟರಾಜ್,‘ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬೇಕಾದರೆ ಸತೀಶ್ ರೆಡ್ಡಿ ಅವರಿಗೆ ಅಧಿಕಾರ ನೀಡಬೇಕು’ ಎಂದು ಹೇಳಿದರು.</p>.<p>ರೆಡ್ಡಿಜನ ಸಂಘದ ಅಧ್ಯಕ್ಷ ಜಯರಾಮರೆಡ್ಡಿ, ಪ್ರಧಾನ ಕಾರ್ಯದರ್ಶಿ ಕೆ.ಎನ್.ಕೃಷ್ಣಾರೆಡ್ಡಿ, ನಿರ್ದೇಶಕ ಶೇಖರ್ ರೆಡ್ಡಿ, ಮಂಜುನಾಥ ರೆಡ್ಡಿ, ಸಾಯಿಬಾಬಾ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಶ್ರೀನಿವಾಸ ರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಮ್ಮನಹಳ್ಳಿ:</strong> ಶಾಸಕ ಸತೀಶ್ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದೆ, ರೆಡ್ಡಿ ಸಮುದಾಯಕ್ಕೆ ತಾರತಮ್ಯ ಮಾಡಲಾಗಿದೆ ಎಂದು ಖಂಡಿಸಿ, ಕರ್ನಾಟಕ ರೆಡ್ಡಿ ಜನ ಸಂಘದ ಸದಸ್ಯರು ಕೋರಮಂಗಲದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಮೆರವಣಿಗೆ ಮೂಲಕ ಸರ್ಜಾಪುರ ರಸ್ತೆಯ ವಾಟರ್ ಟ್ಯಾಂಕ್ ಬಸ್ ನಿಲ್ದಾಣದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ರೆಡ್ಡಿ ಸಮುದಾಯದವರು,ಶಾಸಕ ಸತೀಶ್ ರೆಡ್ಡಿ ಪರ ಘೋಷಣೆ ಕೂಗಿದರು.</p>.<p>‘ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ರೆಡ್ಡಿ ಸಮುದಾಯಕ್ಕೆ ಅನ್ಯಾಯವಾಗಿದೆ. ರಾಜ್ಯದ ದೊಡ್ಡ ಸಮುದಾಯವೊಂದನ್ನು ಕಡೆಗಣಿಸಿರುವುದು ಸರಿಯಲ್ಲ. ಮೂರು ಬಾರಿ ಶಾಸಕರಾಗಿರುವ ಸತೀಶ್ ರೆಡ್ಡಿಯವರಿಗೆ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಎರೆಹೊಸಹಳ್ಳಿಯ ವೇಮನಾನಂದ ಸ್ವಾಮೀಜಿ,‘ಪ್ರಬಲ ರೆಡ್ಡಿ ಸಮುದಾಯವನ್ನು ಕಡೆಗಣಿಸಿರುವುದು ಅಕ್ಷಮ್ಯ. ಹಿಂದಿನ ಸಿದ್ದರಾಮಯ್ಯ ಸಂಪುಟದಲ್ಲಿ ನಾಲ್ವರು ಸಮುದಾಯವನ್ನು ಪ್ರತಿನಿಧಿಸಿದ್ದರು. ಕೇವಲ ಒಂದು ಸಮುದಾಯದ ಓಲೈಕೆಗೆ ನಿಂತಿರುವ ಬಿಜೆಪಿಯ ನಡೆಯೇ ಮುಂದಿನ ದಿನಗಳಲ್ಲಿ ಮುಳುವಾಗಿ ಪರಿಣಮಿಸಲಿದೆ’ ಎಂದರು.</p>.<p>ಸ್ಥಳೀಯ ಮುಖಂಡ ಎಸ್.ಕೆ.ನಟರಾಜ್,‘ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬೇಕಾದರೆ ಸತೀಶ್ ರೆಡ್ಡಿ ಅವರಿಗೆ ಅಧಿಕಾರ ನೀಡಬೇಕು’ ಎಂದು ಹೇಳಿದರು.</p>.<p>ರೆಡ್ಡಿಜನ ಸಂಘದ ಅಧ್ಯಕ್ಷ ಜಯರಾಮರೆಡ್ಡಿ, ಪ್ರಧಾನ ಕಾರ್ಯದರ್ಶಿ ಕೆ.ಎನ್.ಕೃಷ್ಣಾರೆಡ್ಡಿ, ನಿರ್ದೇಶಕ ಶೇಖರ್ ರೆಡ್ಡಿ, ಮಂಜುನಾಥ ರೆಡ್ಡಿ, ಸಾಯಿಬಾಬಾ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಶ್ರೀನಿವಾಸ ರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>