ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿದ ವೇಳೆ, ಅಲ್ಲಿ ಒಟ್ಟು 15 ಮಂದಿ ಕೆಲಸ ಮಾಡುತ್ತಿದ್ದರು. ಅವರೆಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಈ ಪೈಕಿ 12 ಮಂದಿ ಜೀತದಾಳುಗಳಾಗಿ ಕೆಲಸ ಮಾಡುತ್ತಿರುವುದು ಗೊತ್ತಾಗಿತ್ತು. ಈ ಬಗ್ಗೆ ದಕ್ಷಿಣ ಉಪ ವಿಭಾಗದ ಉಪ ವಿಭಾಗಾಧಿಕಾರಿ ಪ್ರಮಾಣ ಪತ್ರ ನೀಡಿದ ಹಿನ್ನೆಲೆಯಲ್ಲಿ ಈ ಎಲ್ಲರನ್ನೂ ಕೆಲಸದಿಂದ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.