<p><strong>ಬೆಂಗಳೂರು: </strong>ರಾಜ್ಯದ ಕ್ಯಾನ್ಸರ್ ರೋಗಿಗಳು ಮೂಳೆ ಮಜ್ಜೆ ಕಸಿ ಚಿಕಿತ್ಸೆಗಾಗಿ (ಬೋನ್ ಮ್ಯಾರೊ ಟ್ರಾನ್ಸ್ಪ್ಲಾಂಟ್) ಖಾಸಗಿ ಆಸ್ಪತ್ರೆಗಳಲ್ಲಿ ₹30ರಿಂದ ₹40 ಲಕ್ಷ ಖರ್ಚು ಮಾಡುವ ಪರಿಸ್ಥಿತಿ ಇತ್ತು. ಇನ್ನು ಮುಂದೆ ಬೆಂಗಳೂರಿನ ಕಿದ್ವಾಯಿ ಸಂಸ್ಥೆಯಲ್ಲಿಯೇ ಈ ಸೌಲಭ್ಯ ಸಿಗಲಿದೆ.</p>.<p>ಈ ಚಿಕಿತ್ಸೆಯ ಗುಣಮಟ್ಟ ಹೆಚ್ಚಿಸಲು ಬಜೆಟ್ನಲ್ಲಿ ₹12 ಕೋಟಿ ಅನುದಾನ ನೀಡಲಾಗಿದೆ. ಈ ಮೊದಲೂ ಕಿದ್ವಾಯಿಯಲ್ಲಿ ಮೂಳೆ ಮಜ್ಜೆ ಕಸಿ ಮಾಡಲಾಗುತ್ತಿತ್ತು. ಆದರೆ ಇನ್ನು ಮುಂದೆ ಗುಣಮಟ್ಟದ ಯಂತ್ರಗಳನ್ನು ಖರೀದಿಸಿ, ಇದಕ್ಕಾಗಿಯೇ ಪ್ರತ್ಯೇಕ ಘಟಕವನ್ನು ತೆರೆಯಲಾಗುತ್ತದೆ.</p>.<p>‘ನಮ್ಮಲ್ಲಿ ಮೊದಲೂ ಅಲೋಜೆನಿಕ್, ಅಟೋಲಜಸ್ ಚಿಕಿತ್ಸೆಗಳು ಇದ್ದವು. ಆದರೆ ಬಜೆಟ್ನಲ್ಲಿ ಹಣ ಸಿಕ್ಕಿದ್ದರಿಂದ ಇನ್ನೂ ಹೆಚ್ಚಿನ ಗುಣಮಟ್ಟದಲ್ಲಿ ಚಿಕಿತ್ಸೆ ನೀಡಬಹುದು. ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತ ಚಿಕಿತ್ಸೆ ಸಿಗಲಿದೆ. ಎಪಿಎಲ್ ಕಾರ್ಡ್ ಹಾಗೂ ಇತರೆ ರೋಗಿಗಳು ₹3 ರಿಂದ ₹4ಲಕ್ಷ ಪಾವತಿಸಬೇಕಾಗಬಹುದು. ವರ್ಷಕ್ಕೆ 80 ರಿಂದ 100 ರೋಗಿಗಳಿಗೆ ಮೂಳೆ ಮಜ್ಜೆ ಕಸಿ ಮಾಡಬಹುದು’ ಎಂದು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ ನಿರ್ದೇಶಕ ಲಿಂಗೇಗೌಡ ಹೇಳಿದರು.</p>.<p>‘ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ರಾಜ್ಯ ಘಟಕವನ್ನು ಉಪರಾಷ್ಟ್ರಪತಿಗಳೊಂದಿಗೆ ಉದ್ಘಾಟಿಸಿದ್ದ, ಮುಖ್ಯಮಂತ್ರಿಗಳು ಇಲ್ಲಿ ಮೂಳೆ ಮಜ್ಜೆ ಕಸಿ ಮಾಡಿಸುವವರಿಗೆ ಬಜೆಟ್ನಲ್ಲಿ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಅವರೇ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ಸ್ವ ಆಸಕ್ತಿಯಿಂದ ಕ್ಯಾನ್ಸರ್ ರೋಗಿಗಳ ಹಿತಕ್ಕಾಗಿ ಯೋಚಿಸಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ಕ್ಯಾನ್ಸರ್ ರೋಗಿಗಳು ಮೂಳೆ ಮಜ್ಜೆ ಕಸಿ ಚಿಕಿತ್ಸೆಗಾಗಿ (ಬೋನ್ ಮ್ಯಾರೊ ಟ್ರಾನ್ಸ್ಪ್ಲಾಂಟ್) ಖಾಸಗಿ ಆಸ್ಪತ್ರೆಗಳಲ್ಲಿ ₹30ರಿಂದ ₹40 ಲಕ್ಷ ಖರ್ಚು ಮಾಡುವ ಪರಿಸ್ಥಿತಿ ಇತ್ತು. ಇನ್ನು ಮುಂದೆ ಬೆಂಗಳೂರಿನ ಕಿದ್ವಾಯಿ ಸಂಸ್ಥೆಯಲ್ಲಿಯೇ ಈ ಸೌಲಭ್ಯ ಸಿಗಲಿದೆ.</p>.<p>ಈ ಚಿಕಿತ್ಸೆಯ ಗುಣಮಟ್ಟ ಹೆಚ್ಚಿಸಲು ಬಜೆಟ್ನಲ್ಲಿ ₹12 ಕೋಟಿ ಅನುದಾನ ನೀಡಲಾಗಿದೆ. ಈ ಮೊದಲೂ ಕಿದ್ವಾಯಿಯಲ್ಲಿ ಮೂಳೆ ಮಜ್ಜೆ ಕಸಿ ಮಾಡಲಾಗುತ್ತಿತ್ತು. ಆದರೆ ಇನ್ನು ಮುಂದೆ ಗುಣಮಟ್ಟದ ಯಂತ್ರಗಳನ್ನು ಖರೀದಿಸಿ, ಇದಕ್ಕಾಗಿಯೇ ಪ್ರತ್ಯೇಕ ಘಟಕವನ್ನು ತೆರೆಯಲಾಗುತ್ತದೆ.</p>.<p>‘ನಮ್ಮಲ್ಲಿ ಮೊದಲೂ ಅಲೋಜೆನಿಕ್, ಅಟೋಲಜಸ್ ಚಿಕಿತ್ಸೆಗಳು ಇದ್ದವು. ಆದರೆ ಬಜೆಟ್ನಲ್ಲಿ ಹಣ ಸಿಕ್ಕಿದ್ದರಿಂದ ಇನ್ನೂ ಹೆಚ್ಚಿನ ಗುಣಮಟ್ಟದಲ್ಲಿ ಚಿಕಿತ್ಸೆ ನೀಡಬಹುದು. ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತ ಚಿಕಿತ್ಸೆ ಸಿಗಲಿದೆ. ಎಪಿಎಲ್ ಕಾರ್ಡ್ ಹಾಗೂ ಇತರೆ ರೋಗಿಗಳು ₹3 ರಿಂದ ₹4ಲಕ್ಷ ಪಾವತಿಸಬೇಕಾಗಬಹುದು. ವರ್ಷಕ್ಕೆ 80 ರಿಂದ 100 ರೋಗಿಗಳಿಗೆ ಮೂಳೆ ಮಜ್ಜೆ ಕಸಿ ಮಾಡಬಹುದು’ ಎಂದು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ ನಿರ್ದೇಶಕ ಲಿಂಗೇಗೌಡ ಹೇಳಿದರು.</p>.<p>‘ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ರಾಜ್ಯ ಘಟಕವನ್ನು ಉಪರಾಷ್ಟ್ರಪತಿಗಳೊಂದಿಗೆ ಉದ್ಘಾಟಿಸಿದ್ದ, ಮುಖ್ಯಮಂತ್ರಿಗಳು ಇಲ್ಲಿ ಮೂಳೆ ಮಜ್ಜೆ ಕಸಿ ಮಾಡಿಸುವವರಿಗೆ ಬಜೆಟ್ನಲ್ಲಿ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಅವರೇ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ಸ್ವ ಆಸಕ್ತಿಯಿಂದ ಕ್ಯಾನ್ಸರ್ ರೋಗಿಗಳ ಹಿತಕ್ಕಾಗಿ ಯೋಚಿಸಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>