<p><strong>ಬೆಂಗಳೂರು:</strong> ಬುಕ್ ಬ್ರಹ್ಮ ಸಂಸ್ಥೆಯು 2024ನೇ ಸಾಲಿನ ‘ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ’ಗೆ ಕಥೆಗಳನ್ನು ಹಾಗೂ ‘ಕಾದಂಬರಿ ಪುರಸ್ಕಾರ’ಕ್ಕೆ ಕಾದಂಬರಿಗಳನ್ನು ಆಹ್ವಾನಿಸಿದೆ. </p>.<p>2023ರಲ್ಲಿ ಪ್ರಕಟಗೊಂಡ ಕಾದಂಬರಿಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುತ್ತದೆ. ಕಾದಂಬರಿ ಪುರಸ್ಕಾರವು ₹ 1 ಲಕ್ಷ ನಗದು ಒಳಗೊಂಡಿದೆ. ಈ ಮೊತ್ತದಲ್ಲಿ ಆಯ್ಕೆಯಾದ ಕೃತಿಯ ಲೇಖಕರಿಗೆ ₹ 75 ಸಾವಿರ ಹಾಗೂ ಪ್ರಕಾಶಕರಿಗೆ ₹ 25 ಸಾವಿರ ನೀಡಲಾಗುತ್ತದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ ₹ 5 ಸಾವಿರ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.</p>.<p>ಕಥಾ ಸ್ಪರ್ಧೆಗೆ ಅಪ್ರಕಟಿತ ಕಥೆಗಳನ್ನು ಪರಿಗಣಿಸಲಾಗುತ್ತದೆ. ಪ್ರಥಮ ಸ್ಥಾನ ಪಡೆದ ಕಥೆಗೆ ₹ 50 ಸಾವಿರ ನಗದು ಇರಲಿದೆ. ದ್ವಿತೀಯ ಸ್ಥಾನ ಪಡೆದ ಕಥೆಗೆ ₹ 25 ಸಾವಿರ, ತೃತೀಯ ಸ್ಥಾನ ಪಡೆದ ಕಥೆಗೆ ₹ 15 ಸಾವಿರ ನಗದು ಇರಲಿದೆ. ಉಳಿದಂತೆ ಐದು ಕಥೆಗಳಿಗೆ ತಲಾ ₹ 5 ಸಾವಿರ ನಗದು ಒಳಗೊಂಡ ಸಮಾಧಾನಕರ ಬಹುಮಾನ ನೀಡಲಾಗುತ್ತದೆ. ಅಂತಿಮ ಸುತ್ತಿಗೆ ಆಯ್ಕೆಯಾಗುವ 17 ಕಥೆಗಳಿಗೆ ತಲಾ ₹ 2 ಸಾವಿರ ರೂಪಾಯಿ ನೀಡಲಾಗುತ್ತದೆ. ಆಯ್ಕೆಯಾದ 25 ಕಥೆಗಳನ್ನು ಒಳಗೊಂಡ ಪುಸ್ತಕ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ. </p>.<p>ಕಾದಂಬರಿ ಪುರಸ್ಕಾರಕ್ಕೆ ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಹಾಗೂ ‘ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ’ಗೆ ಕಥೆಗಳನ್ನು ಕಳುಹಿಸಲು ಮೇ 1 ಕಡೆಯ ದಿನ. ಕಥೆಗಳನ್ನು ಇ ಮೇಲ್ bbks2024@bookbrahma.com ಮೂಲಕವೂ ಕಳಿಸಬಹುದು. ಜುಲೈ 1ರಂದು ಅಂತಿಮ ಸುತ್ತು ಪ್ರವೇಶಿಸಿದ ಐದು ಕಾದಂಬರಿಗಳು ಹಾಗೂ 25 ಕಥೆಗಳನ್ನು ಪ್ರಕಟಿಸಲಾಗುತ್ತದೆ. ಆ.9ರಿಂದ 12ರವರೆಗೆ ನಡೆಯುವ ‘ಬುಕ್ ಬ್ರಹ್ಮ ಸಾಹಿತ್ಯ ಉತ್ಸವ’ದಲ್ಲಿ ವಿಜೇತರನ್ನು ಘೋಷಿಸಿ, ಪ್ರಶಸ್ತಿ ವಿತರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. </p>.<p>ಕಾದಂಬರಿ ಹಾಗೂ ಕಥೆಗಳನ್ನು ಕಳುಹಿಸಬೇಕಾದ ವಿಳಾಸ: ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ ಕನ್ನಡ, ಮೂರನೇ ಮಹಡಿ, ಆರ್.ಕೆ. ಕಾಂಪ್ಲೆಕ್ಸ್, ಕೆಎಸ್ಎಸ್ಐಡಿಸಿ ಆವರಣ, ಎಲೆಕ್ಟ್ರಾನಿಕ್ಸ್ ಸಿಟಿ ಮೊದಲ ಹಂತ, ಬೆಂಗಳೂರು-560100. ಸಂಪರ್ಕ: 78926 08118.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬುಕ್ ಬ್ರಹ್ಮ ಸಂಸ್ಥೆಯು 2024ನೇ ಸಾಲಿನ ‘ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ’ಗೆ ಕಥೆಗಳನ್ನು ಹಾಗೂ ‘ಕಾದಂಬರಿ ಪುರಸ್ಕಾರ’ಕ್ಕೆ ಕಾದಂಬರಿಗಳನ್ನು ಆಹ್ವಾನಿಸಿದೆ. </p>.<p>2023ರಲ್ಲಿ ಪ್ರಕಟಗೊಂಡ ಕಾದಂಬರಿಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುತ್ತದೆ. ಕಾದಂಬರಿ ಪುರಸ್ಕಾರವು ₹ 1 ಲಕ್ಷ ನಗದು ಒಳಗೊಂಡಿದೆ. ಈ ಮೊತ್ತದಲ್ಲಿ ಆಯ್ಕೆಯಾದ ಕೃತಿಯ ಲೇಖಕರಿಗೆ ₹ 75 ಸಾವಿರ ಹಾಗೂ ಪ್ರಕಾಶಕರಿಗೆ ₹ 25 ಸಾವಿರ ನೀಡಲಾಗುತ್ತದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ ₹ 5 ಸಾವಿರ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.</p>.<p>ಕಥಾ ಸ್ಪರ್ಧೆಗೆ ಅಪ್ರಕಟಿತ ಕಥೆಗಳನ್ನು ಪರಿಗಣಿಸಲಾಗುತ್ತದೆ. ಪ್ರಥಮ ಸ್ಥಾನ ಪಡೆದ ಕಥೆಗೆ ₹ 50 ಸಾವಿರ ನಗದು ಇರಲಿದೆ. ದ್ವಿತೀಯ ಸ್ಥಾನ ಪಡೆದ ಕಥೆಗೆ ₹ 25 ಸಾವಿರ, ತೃತೀಯ ಸ್ಥಾನ ಪಡೆದ ಕಥೆಗೆ ₹ 15 ಸಾವಿರ ನಗದು ಇರಲಿದೆ. ಉಳಿದಂತೆ ಐದು ಕಥೆಗಳಿಗೆ ತಲಾ ₹ 5 ಸಾವಿರ ನಗದು ಒಳಗೊಂಡ ಸಮಾಧಾನಕರ ಬಹುಮಾನ ನೀಡಲಾಗುತ್ತದೆ. ಅಂತಿಮ ಸುತ್ತಿಗೆ ಆಯ್ಕೆಯಾಗುವ 17 ಕಥೆಗಳಿಗೆ ತಲಾ ₹ 2 ಸಾವಿರ ರೂಪಾಯಿ ನೀಡಲಾಗುತ್ತದೆ. ಆಯ್ಕೆಯಾದ 25 ಕಥೆಗಳನ್ನು ಒಳಗೊಂಡ ಪುಸ್ತಕ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ. </p>.<p>ಕಾದಂಬರಿ ಪುರಸ್ಕಾರಕ್ಕೆ ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಹಾಗೂ ‘ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ’ಗೆ ಕಥೆಗಳನ್ನು ಕಳುಹಿಸಲು ಮೇ 1 ಕಡೆಯ ದಿನ. ಕಥೆಗಳನ್ನು ಇ ಮೇಲ್ bbks2024@bookbrahma.com ಮೂಲಕವೂ ಕಳಿಸಬಹುದು. ಜುಲೈ 1ರಂದು ಅಂತಿಮ ಸುತ್ತು ಪ್ರವೇಶಿಸಿದ ಐದು ಕಾದಂಬರಿಗಳು ಹಾಗೂ 25 ಕಥೆಗಳನ್ನು ಪ್ರಕಟಿಸಲಾಗುತ್ತದೆ. ಆ.9ರಿಂದ 12ರವರೆಗೆ ನಡೆಯುವ ‘ಬುಕ್ ಬ್ರಹ್ಮ ಸಾಹಿತ್ಯ ಉತ್ಸವ’ದಲ್ಲಿ ವಿಜೇತರನ್ನು ಘೋಷಿಸಿ, ಪ್ರಶಸ್ತಿ ವಿತರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. </p>.<p>ಕಾದಂಬರಿ ಹಾಗೂ ಕಥೆಗಳನ್ನು ಕಳುಹಿಸಬೇಕಾದ ವಿಳಾಸ: ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ ಕನ್ನಡ, ಮೂರನೇ ಮಹಡಿ, ಆರ್.ಕೆ. ಕಾಂಪ್ಲೆಕ್ಸ್, ಕೆಎಸ್ಎಸ್ಐಡಿಸಿ ಆವರಣ, ಎಲೆಕ್ಟ್ರಾನಿಕ್ಸ್ ಸಿಟಿ ಮೊದಲ ಹಂತ, ಬೆಂಗಳೂರು-560100. ಸಂಪರ್ಕ: 78926 08118.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>