ಬೆಂಗಳೂರು: ಸ್ವಾಭಿಮಾನಿ ಕರ್ನಾಟಕ ವೇದಿಕೆಯು ತನ್ನ 20ನೇ ವಾರ್ಷಿಕೋತ್ಸವದ ಅಂಗವಾಗಿ ‘ಸ್ವಾಭಿಮಾನಿ ಪುಸ್ತಕ ಬಹುಮಾನ’ ಸ್ಪರ್ಧೆ ಹಮ್ಮಿಕೊಂಡಿದೆ.
2020ನೇ ಸಾಲಿನ ಜ.1ರಿಂದ ಡಿಸೆಂಬರ್ 31ರೊಳಗೆ ಪ್ರಕಟವಾದ (ಪ್ರಥಮ ಮುದ್ರಣ) ಸಾಹಿತ್ಯದ ಎಲ್ಲ ಪ್ರಕಾರದ ಕೃತಿಗಳನ್ನು ಸ್ಪರ್ಧೆಗೆ ಆಹ್ವಾನಿಸಲಾಗಿದೆ. ಮಾ.15ರೊಳಗೆ ವೇದಿಕೆಯ ಕಚೇರಿಗೆ ತಲುಪಿಸಬೇಕು. ಪ್ರಶಸ್ತಿಯು ₹5 ಸಾವಿರ ನಗದು ಒಳಗೊಂಡಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯನ್ನು (ಮೊ.ಸಂ. 96860 73837) ಸಂಪರ್ಕಿಸುವಂತೆ ವೇದಿಕೆ ಅಧ್ಯಕ್ಷ ದ್ವಾರನಕುಂಟೆ ಪಾತಣ್ಣ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.