<p><strong>ಬೆಂಗಳೂರು</strong>: ‘ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಏಕಗವಾಕ್ಷಿ ಯೋಜನೆಯಡಿ ಪುಸ್ತಕ ಖರೀದಿಗೆ ಎದುರಾಗಿರುವ ಕಾನೂನು ತೊಡಕುಗಳನ್ನು ನಿವಾರಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮನವಿ ಮಾಡಿದ್ದಾರೆ. </p>.<p>ಕನ್ನಡ ಪುಸ್ತಕ ಪ್ರಾಧಿಕಾರ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ‘ಏಕಗವಾಕ್ಷಿ ಯೋಜನೆ ಮುಂದುವರಿಸಲು ಎದುರಾಗಿರುವ ಕಾನೂನು ತೊಡಕನ್ನು ಸರ್ಕಾರವು ತುರ್ತಾಗಿ ನಿವಾರಿಸಬೇಕು’ ಎಂದು ಪ್ರಾಧಿಕಾರದ ಅಧ್ಯಕ್ಷ ಮಾನಸ ಮನವಿ ಮಾಡಿದ್ದರು. ಆ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಶಿವರಾಜ ತಂಗಡಗಿ, ಮುಖ್ಯಮಂತ್ರಿ ಅವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದರು. ಅದರಂತೆ ಈ ಬಗ್ಗೆ ಅವರು ಪತ್ರ ಬರೆದಿದ್ದಾರೆ. </p>.<p>‘ಈ ಯೋಜನೆಗೆ ಪ್ರತ್ಯೇಕ ಲೆಕ್ಕ ಶೀರ್ಷಿಕೆ ಇರದ ಪರಿಣಾಮ ಗ್ರಂಥಾಲಯ ಕರವನ್ನು ಪುಸ್ತಕ ಖರೀದಿಗೆ ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ತಾಂತ್ರಿಕ ತೊಡಕನ್ನು ಸರಿಪಡಿಸಬೇಕಿದೆ. ಅಗತ್ಯ ಲೆಕ್ಕ ಶೀರ್ಷಿಕೆ ಸೃಜಿಸಲು ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಏಕಗವಾಕ್ಷಿ ಯೋಜನೆಯಡಿ ಪುಸ್ತಕ ಖರೀದಿಗೆ ಎದುರಾಗಿರುವ ಕಾನೂನು ತೊಡಕುಗಳನ್ನು ನಿವಾರಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮನವಿ ಮಾಡಿದ್ದಾರೆ. </p>.<p>ಕನ್ನಡ ಪುಸ್ತಕ ಪ್ರಾಧಿಕಾರ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ‘ಏಕಗವಾಕ್ಷಿ ಯೋಜನೆ ಮುಂದುವರಿಸಲು ಎದುರಾಗಿರುವ ಕಾನೂನು ತೊಡಕನ್ನು ಸರ್ಕಾರವು ತುರ್ತಾಗಿ ನಿವಾರಿಸಬೇಕು’ ಎಂದು ಪ್ರಾಧಿಕಾರದ ಅಧ್ಯಕ್ಷ ಮಾನಸ ಮನವಿ ಮಾಡಿದ್ದರು. ಆ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಶಿವರಾಜ ತಂಗಡಗಿ, ಮುಖ್ಯಮಂತ್ರಿ ಅವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದರು. ಅದರಂತೆ ಈ ಬಗ್ಗೆ ಅವರು ಪತ್ರ ಬರೆದಿದ್ದಾರೆ. </p>.<p>‘ಈ ಯೋಜನೆಗೆ ಪ್ರತ್ಯೇಕ ಲೆಕ್ಕ ಶೀರ್ಷಿಕೆ ಇರದ ಪರಿಣಾಮ ಗ್ರಂಥಾಲಯ ಕರವನ್ನು ಪುಸ್ತಕ ಖರೀದಿಗೆ ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ತಾಂತ್ರಿಕ ತೊಡಕನ್ನು ಸರಿಪಡಿಸಬೇಕಿದೆ. ಅಗತ್ಯ ಲೆಕ್ಕ ಶೀರ್ಷಿಕೆ ಸೃಜಿಸಲು ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>