‘ನಗರದ ಸುಭಾಷ್ ನಗರ ಮೈದಾನದಲ್ಲಿ ಚಕ್ರವರ್ತಿ ರಾಜಗೋಪಾಲಾಚಾರಿ, ಎನ್.ಜಿ.ರಂಗ, ಕೃಷ್ಣ ಮೆನನ್, ಅಟಲ್ ಬಿಹಾರಿ ವಾಜಪೇಯಿ ಅವರಂತಹ ಮೇರುನಾಯಕರ ಸಾರ್ವಜನಿಕ ಸಭೆಗಳಿಗೆ ಜನಸಾಗರವೇ ಹರಿದು ಬರುತ್ತಿತ್ತು. ಈಗ ಸಾರ್ವಜನಿಕ ಸಭೆಗಳಿಗೆ ಜನರನ್ನು ಕರೆತರಲು ಸಾರಿಗೆ ಸೌಲಭ್ಯ ಕಲ್ಪಿಸುವುದರ ಜೊತೆಗೆ ಪ್ಯಾಕೇಟ್ ಟು ಪೇಮೆಂಟ್ (ಊಟದ ಬುತ್ತಿಯಿಂದ ಹಿಡಿದು ಸಂಭಾವನೆಯವರೆಗೆ) ಎಲ್ಲವನ್ನೂ ವ್ಯವಸ್ಥೆ ಮಾಡಬೇಕಾಗಿದೆ’ ಎಂದರು.