ಬೆಂಗಳೂರು: ‘ದೇಶದಲ್ಲಿ ಗಲಭೆ, ಘರ್ಷಣೆಗಳು ನಡೆಯಬಾರದು ಎಂಬ ಕಾರಣಕ್ಕೆ ದೇಶ ವಿಭಜನೆಯ ವೇಳೆ ಭಾರತದಲ್ಲಿದ್ದ ಮುಸ್ಲಿಮರನ್ನು ಪಾಕಿಸ್ತಾನಕ್ಕೆ, ಅಲ್ಲಿದ್ದ ಹಿಂದೂಗಳನ್ನು ಭಾರತಕ್ಕೆ ಸ್ಥಳಾಂತರಿಸುವಂತೆ ಅಂಬೇಡ್ಕರ್ ಹೇಳಿದ್ದರು. ಆದರೆ, ಆಗ ಯಾರೂ ಅದಕ್ಕೆ ಒಪ್ಪಲಿಲ್ಲ. ಅವರು ಏಕೆ ಹಾಗೆ ಹೇಳಿದ್ದರು ಎನ್ನುವುದನ್ನು ಈಗ ಯಾರೂ ಚರ್ಚಿಸುತ್ತಿಲ್ಲ’ ಎಂದು ಸಾಹಿತಿ ಎಸ್.ಎಲ್. ಭೈರಪ್ಪ ಬೇಸರ ವ್ಯಕ್ತಪಡಿಸಿದರು.