<p><strong>ಬೆಂಗಳೂರು</strong>: ಸಪ್ನ ಬುಕ್ ಹೌಸ್ ವತಿಯಿಂದ ಮಾರ್ಚ್ 2ರಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರು ರಚಿಸಿರುವ ‘ವಿಶ್ವ ಸಂಸ್ಕೃತಿಯ ಮಹಾಯಾನ’ ಗದ್ಯ ಮಹಾಕಾವ್ಯ ಕೃತಿಯು ಚಿಕ್ಕಬಳ್ಳಾಪುರದ ಎಸ್ಜೆಸಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಡುಗಡೆ ಆಗಲಿದೆ.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ. ವೀರಪ್ಪ ಮೊಯಿಲಿ, ‘ವಿಶ್ವ ಸಂಸ್ಕೃತಿಯ ಮಹಾಯಾನ ಗದ್ಯ ಕಾವ್ಯವೂ ನಾಲ್ಕು ಸಂಪುಟಗಳಲ್ಲಿ ಬರಲಿದೆ. ಸದ್ಯ ಮೊದಲ ಸಂಪುಟ ಮಾರ್ಚ್ 2ರಂದು ಬಿಡುಗಡೆಯಾಗಲಿದೆ‘ ಎಂದರು.</p>.<p>‘ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜೆಎನ್ಯು ನಿವೃತ್ತ ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆ ಪುಸ್ತಕದ ಕುರಿತು ಮಾತನಾಡಲಿದ್ದಾರೆ’ ಎಂದು ತಿಳಿಸಿದರು.</p>.<p>ಶಿಕ್ಷಣ ತಜ್ಞ ಕೆ.ಇ. ರಾಧಾಕೃಷ್ಣ, ಸಂಘಟನಾ ಸಮಿತಿ ಅಧ್ಯಕ್ಷ ರಮೇಶ, ಮಾಜಿ ಸಚಿವ ಎಚ್.ಎಂ. ರೇವಣ್ಣ, ಸಪ್ನ ಬುಕ್ ಹೌಸ್ನ ವ್ಯವಸ್ಥಾಪಕ ನಿರ್ದೇಶಕ ನಿತಿನ್ ಷಾ, ಆಂಜನಪ್ಪ, ಕಮಲೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಪ್ನ ಬುಕ್ ಹೌಸ್ ವತಿಯಿಂದ ಮಾರ್ಚ್ 2ರಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರು ರಚಿಸಿರುವ ‘ವಿಶ್ವ ಸಂಸ್ಕೃತಿಯ ಮಹಾಯಾನ’ ಗದ್ಯ ಮಹಾಕಾವ್ಯ ಕೃತಿಯು ಚಿಕ್ಕಬಳ್ಳಾಪುರದ ಎಸ್ಜೆಸಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಡುಗಡೆ ಆಗಲಿದೆ.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ. ವೀರಪ್ಪ ಮೊಯಿಲಿ, ‘ವಿಶ್ವ ಸಂಸ್ಕೃತಿಯ ಮಹಾಯಾನ ಗದ್ಯ ಕಾವ್ಯವೂ ನಾಲ್ಕು ಸಂಪುಟಗಳಲ್ಲಿ ಬರಲಿದೆ. ಸದ್ಯ ಮೊದಲ ಸಂಪುಟ ಮಾರ್ಚ್ 2ರಂದು ಬಿಡುಗಡೆಯಾಗಲಿದೆ‘ ಎಂದರು.</p>.<p>‘ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜೆಎನ್ಯು ನಿವೃತ್ತ ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆ ಪುಸ್ತಕದ ಕುರಿತು ಮಾತನಾಡಲಿದ್ದಾರೆ’ ಎಂದು ತಿಳಿಸಿದರು.</p>.<p>ಶಿಕ್ಷಣ ತಜ್ಞ ಕೆ.ಇ. ರಾಧಾಕೃಷ್ಣ, ಸಂಘಟನಾ ಸಮಿತಿ ಅಧ್ಯಕ್ಷ ರಮೇಶ, ಮಾಜಿ ಸಚಿವ ಎಚ್.ಎಂ. ರೇವಣ್ಣ, ಸಪ್ನ ಬುಕ್ ಹೌಸ್ನ ವ್ಯವಸ್ಥಾಪಕ ನಿರ್ದೇಶಕ ನಿತಿನ್ ಷಾ, ಆಂಜನಪ್ಪ, ಕಮಲೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>