ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿಯಲ್ಲಿ ತೇಜಸ್ವಿ ಹುಟ್ಟುಹಬ್ಬ ಆಚರಣೆ

Last Updated 9 ಸೆಪ್ಟೆಂಬರ್ 2018, 14:39 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಹುಟ್ಟುಹಬ್ಬವನ್ನು ವಿನೂತನವಾಗಿ ಆಚರಿಸಲಾಯಿತು.

ತೇಜಸ್ವಿ ಅವರ 80ನೇ ಹುಟ್ಟುಹಬ್ಬದ ಅಂಗವಾಗಿ ಬಹುರೂಪಿ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆ.ಎಸ್‌.ಪರಮೇಶ್ವರ ಅವರ ‘ತೇಜಸ್ವಿ ಸಿಕ್ಕರು‘ ಕೃತಿಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಂಕಣಕಾರ ನಾಗೇಶ ಹೆಗಡೆ, ‘ಕೊಳ್ಳುಬಾಕ ಸಂಸ್ಕೃತಿಯಿಂದ ಪರಿಸರ, ಜೀವ ವೈವಿಧ್ಯದ ಜೊತೆಗೆ ಕನ್ನಡವೂ ನಾಶವಾಗುತ್ತಿದೆ. ತೇಜಸ್ವಿ ಅವರು ಜಾಗತೀಕರಣ ವಿರುದ್ಧದ ಎಚ್ಚರ ಪ್ರಜ್ಞೆ’ ಎಂದು ಅವರು ಹೇಳಿದರು.

‘ತೇಜಸ್ವಿ ಮೊಗೆದಷ್ಟೂ ಮುಗಿಯದ ಜ್ಞಾನ ಭಂಡಾರ. ನಾಳೆ ಬರುವ ಆತಂಕವನ್ನು ಅವರು ಇಂದೇ ಗುರುತಿಸುತ್ತಿದ್ದರು’ ಎಂದರು.

ಪತ್ರಕರ್ತ ಜಿ.ಎನ್‌.ಮೋಹನ್‌ ಮಾತನಾಡಿ, ‘ತೇಜಸ್ವಿ ಪ್ರತಿರೋಧದ ಸಂಕೇತ, ಕನ್ನಡಕ್ಕೆ ಯೂನಿಕೋಡ್‌ ಬೇಕು ಎಂದು ಪರಿಶ್ರಮ ಹಾಕಿದರು. ಹೊಸ ಪೀಳಿಗೆಯವರು ಇದರ ಪ್ರಯೋಜನ ಪಡೆದುಕೊಳ್ಳಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT