ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ, ‘ನಚ್ಚಿ ಅವರಿಗೆ ಎಲ್ಲ ವಿಷಯದ ಬಗ್ಗೆಯೂ ಮಾಹಿತಿ ಇರುತ್ತಿತ್ತು.ಅವರು ತಮ್ಮದೇ ಆದ ರೀತಿಯಲ್ಲಿ ಬದುಕು ನಡೆಸಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ. ಇಂತಹ ಪತ್ರಕರ್ತರ ಬದುಕು, ಬರಹಗಳನ್ನು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಿಳಿಸುವ ಕೆಲಸವಾಗಬೇಕು. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ನಾಲ್ಕನೆ ಅಂಗ. ಅದು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಿ, ಸಮಾಜ ಸುಧಾರಣೆಗೆ ಶ್ರಮಿಸಬೇಕು’ ಎಂದು ತಿಳಿಸಿದರು.