<p><strong>ಬೆಂಗಳೂರು</strong>: ದೇಶದ 10 ಕೋಟಿ ಆದಿವಾಸಿಗಳಿಗೆ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಬೆಳಕಿನ ಕಿಂಡಿ ಇದ್ದಂತೆ ಎಂದು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತೇಜಸ್ವಿ ಕಟ್ಟೀಮನಿ ಅಭಿಪ್ರಾಯಪಟ್ಟರು.</p>.<p>‘ಅವಧಿ’ ಅಂತರ್ಜಾಲ ತಾಣ ಏರ್ಪಡಿಸಿದ್ದ ಆನ್ಲೈನ್ ಕಾರ್ಯಕ್ರಮದಲ್ಲಿ ಪ್ರೊ. ತೇಜಸ್ವಿ ಕಟ್ಟೀಮನಿ ಅವರ ಆತ್ಮಕಥನ ‘ಜಂಗ್ಲೀ ಕುಲಪತಿಯ ಜಂಗೀ ಕಥೆ’ ಬಿಡುಗಡೆ ಮಾಡಲಾಯಿತು. ಮಧ್ಯ ಪ್ರದೇಶದ ಅಮರ ಕಂಟಕದಲ್ಲಿ ಈ ಮೊದಲು ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿಯಾಗಿ ವಿಶ್ವವಿದ್ಯಾಲಯ ಕಟ್ಟಿದ ಕಥನವನ್ನು ಈ ಕೃತಿ ಒಳಗೊಂಡಿದೆ.</p>.<p>‘ಎಮ್ಮೆ ಕಾಯುತ್ತಿದ್ದ, ಒಂದೇ ಶರ್ಟ್ನಲ್ಲಿ ಕಾಲೇಜಿನ ವಿದ್ಯಾಭ್ಯಾಸ ಮಾಡಿದ ಹಳ್ಳಿ ಹುಡುಗನ ಮನಸ್ಸಿನ ತಲ್ಲಣ ಇದರಲ್ಲಿ ಚಿತ್ರಣಗೊಂಡಿದೆ. ದೇಶದ ಎಲ್ಲೆಡೆ ಹಂಚಿ ಹೋಗಿರುವ ಬುಡಕಟ್ಟು ಮಕ್ಕಳಿಗೆ ಈ ವಿಶ್ವವಿದ್ಯಾಲಯ ಆಸರೆಯಾಗಿದೆ. ಈ ಸಮಯದಲ್ಲಿ ಅವರ ಕುಶಲತೆ ದೇಶ– ವಿದೇಶಕ್ಕೆ ಪರಿಚಯಿಸುವ ಅವಕಾಶ ನನಗೆ ದೊರೆಯಿತು’ ಎಂದು ತೇಜಸ್ವಿ ಕಟ್ಟೀಮನಿ ಸಂತಸ ವ್ಯಕ್ತಪಡಿಸಿದರು.</p>.<p>ಕೃತಿ ಬಿಡುಗಡೆ ಮಾಡಿದ ಪತ್ರಕರ್ತ ಜೋಗಿ, ‘ಯಾವುದೇ ವಿಶ್ವವಿದ್ಯಾಲಯಕ್ಕೂ ಆತ್ಮಕತೆ ಇರುತ್ತದೆ ಎನ್ನುವುದನ್ನು ತೇಜಸ್ವಿ ಕಟ್ಟೀಮನಿ ತೋರಿಸಿಕೊಟ್ಟಿದ್ದಾರೆ’ ಎಂದರು. ಕೃತಿ ಕುರಿತು ಕವಯಿತ್ರಿ ಎಚ್.ಎಲ್. ಪುಷ್ಪಾ, ‘ಅವಧಿ’ ಪ್ರಧಾನ ಸಂಪಾದಕ ಜಿ.ಎನ್. ಮೋಹನ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೇಶದ 10 ಕೋಟಿ ಆದಿವಾಸಿಗಳಿಗೆ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಬೆಳಕಿನ ಕಿಂಡಿ ಇದ್ದಂತೆ ಎಂದು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತೇಜಸ್ವಿ ಕಟ್ಟೀಮನಿ ಅಭಿಪ್ರಾಯಪಟ್ಟರು.</p>.<p>‘ಅವಧಿ’ ಅಂತರ್ಜಾಲ ತಾಣ ಏರ್ಪಡಿಸಿದ್ದ ಆನ್ಲೈನ್ ಕಾರ್ಯಕ್ರಮದಲ್ಲಿ ಪ್ರೊ. ತೇಜಸ್ವಿ ಕಟ್ಟೀಮನಿ ಅವರ ಆತ್ಮಕಥನ ‘ಜಂಗ್ಲೀ ಕುಲಪತಿಯ ಜಂಗೀ ಕಥೆ’ ಬಿಡುಗಡೆ ಮಾಡಲಾಯಿತು. ಮಧ್ಯ ಪ್ರದೇಶದ ಅಮರ ಕಂಟಕದಲ್ಲಿ ಈ ಮೊದಲು ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿಯಾಗಿ ವಿಶ್ವವಿದ್ಯಾಲಯ ಕಟ್ಟಿದ ಕಥನವನ್ನು ಈ ಕೃತಿ ಒಳಗೊಂಡಿದೆ.</p>.<p>‘ಎಮ್ಮೆ ಕಾಯುತ್ತಿದ್ದ, ಒಂದೇ ಶರ್ಟ್ನಲ್ಲಿ ಕಾಲೇಜಿನ ವಿದ್ಯಾಭ್ಯಾಸ ಮಾಡಿದ ಹಳ್ಳಿ ಹುಡುಗನ ಮನಸ್ಸಿನ ತಲ್ಲಣ ಇದರಲ್ಲಿ ಚಿತ್ರಣಗೊಂಡಿದೆ. ದೇಶದ ಎಲ್ಲೆಡೆ ಹಂಚಿ ಹೋಗಿರುವ ಬುಡಕಟ್ಟು ಮಕ್ಕಳಿಗೆ ಈ ವಿಶ್ವವಿದ್ಯಾಲಯ ಆಸರೆಯಾಗಿದೆ. ಈ ಸಮಯದಲ್ಲಿ ಅವರ ಕುಶಲತೆ ದೇಶ– ವಿದೇಶಕ್ಕೆ ಪರಿಚಯಿಸುವ ಅವಕಾಶ ನನಗೆ ದೊರೆಯಿತು’ ಎಂದು ತೇಜಸ್ವಿ ಕಟ್ಟೀಮನಿ ಸಂತಸ ವ್ಯಕ್ತಪಡಿಸಿದರು.</p>.<p>ಕೃತಿ ಬಿಡುಗಡೆ ಮಾಡಿದ ಪತ್ರಕರ್ತ ಜೋಗಿ, ‘ಯಾವುದೇ ವಿಶ್ವವಿದ್ಯಾಲಯಕ್ಕೂ ಆತ್ಮಕತೆ ಇರುತ್ತದೆ ಎನ್ನುವುದನ್ನು ತೇಜಸ್ವಿ ಕಟ್ಟೀಮನಿ ತೋರಿಸಿಕೊಟ್ಟಿದ್ದಾರೆ’ ಎಂದರು. ಕೃತಿ ಕುರಿತು ಕವಯಿತ್ರಿ ಎಚ್.ಎಲ್. ಪುಷ್ಪಾ, ‘ಅವಧಿ’ ಪ್ರಧಾನ ಸಂಪಾದಕ ಜಿ.ಎನ್. ಮೋಹನ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>