‘ಪುಸ್ತಕ ಪ್ರಾಧಿಕಾರವು ಲೇಖಕರು, ಪ್ರಕಾಶಕರು ಮತ್ತು ಓದುಗರ ನಡುವೆ ಸಮನ್ವಯ ಸಾಧಿಸಿ, ಪುಸ್ತಕ ಸಂಸ್ಕೃತಿಯನ್ನು ಬೆಳೆಸುವಂತಾಗಬೇಕು. ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 8 ಸಾವಿರ ಪುಸ್ತಕಗಳು ಪ್ರಕಟವಾಗುತ್ತಿವೆ. ಇದು ಕನ್ನಡ ಭಾಷೆಯ ಸೃಜನಶೀಲತೆಗೆ ಸಾಕ್ಷಿ. ಪ್ರಕಟಗೊಂಡ ವರ್ಷವೇ ಆ ಪುಸ್ತಕಗಳನ್ನು ಜನರಿಗೆ ತಲುಪಿಸುವ ಕೆಲಸ ಸರ್ಕಾರದಿಂದ ಆಗುತ್ತಿಲ್ಲ. ವಿವಿಧ ಕಾಮಗಾರಿಗಳಿಗೆ ಸಾವಿರಾರು ಕೋಟಿ ರೂಪಾಯಿ ಹಣ ವೆಚ್ಚ ಮಾಡುವ ಸರ್ಕಾರ, ಪುಸ್ತಕ ಖರೀದಿಗೆ ಅಗತ್ಯವಿರುವ ₹ 10 ಕೋಟಿ ಹಣ ನೀಡಲು ಹಿಂದೆ ಮುಂದೆ ನೋಡುತ್ತಿರುವುದು ನಮ್ಮ ವ್ಯವಸ್ಥೆಯ ಜ್ಞಾನ ದಾರಿದ್ರ್ಯ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.