ಬೆಂಗಳೂರು: ‘ಯಜ್ಞ–ಯಾಗ, ಹೋಮಗಳಿಂದ ಹೊರಹೊಮ್ಮುವ ಹೊಗೆಯು ವ್ಯಕ್ತಿಯನ್ನು ಕಳಂಕಿತನಾಗಿಸುತ್ತದೆ. ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಹೊಳೆನರಸೀಪುರದ ತಮ್ಮ ನಿವಾಸದಲ್ಲಿ ಇತ್ತೀಚೆಗೆ ಬಹಳ ದೊಡ್ಡ ಹೋಮ ಮಾಡಿಸಿ, ಪರಪ್ಪನ ಅಗ್ರಹಾರ ಸೇರಿದರು. ಹೋಮ ಫಲ ಯಾವ ರೀತಿ ಇರುತ್ತದೆ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ’ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ನಿಯೋಜಿತ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ತಿಳಿಸಿದರು.