<p><strong>ಬೆಂಗಳೂರು</strong>: ‘ಸರ್ಕಾರ ನೀಡುತ್ತಿರುವ ಭಾಗ್ಯಗಳನ್ನು ಮಹಿಳಾ ದೃಷ್ಟಿಕೋನದಿಂದ ನೋಡುವ ಅಗತ್ಯವಿದೆ’ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಆರ್. ಸುನಂದಮ್ಮ ಅವರು ಅಭಿಪ್ರಾಯಪಟ್ಟರು.</p><p>ಬಹುರೂಪಿ ಪ್ರಕಾಶನ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ ಚೀ.ಜ.ರಾಜೀವ ಅವರ ‘ಪ್ರಿಯ ಗಾಂಧಿ’ ಪುಸ್ತಕ ಜನಾರ್ಪಣೆಗೊಳಿಸಿ ಅವರು ಮಾತನಾಡಿದರು.</p><p>‘ಭಾಗ್ಯಗಳನ್ನು ಕೊಡುಗೆಯಾಗಿ ನೋಡದೆ ಅದನ್ನು ಪರ್ಯಾಯ ದೃಷ್ಟಿಕೋನದಿಂದ ನೋಡಬೇಕಾದ ಅಗತ್ಯವಿದೆ. ಮಹಿಳಾ ಸಬಲೀಕರಣಕ್ಕೆ ಅದು ನೀಡಿರುವ ಕೊಡುಗೆ ದೊಡ್ಡದು. ಇವು ಗಾಂಧೀಜಿ ಅವರ ದೃಷ್ಟಿಕೋನವನ್ನು ಹೊಂದಿವೆ’ ಎಂದರು.</p>.<p>ಪತ್ರಕರ್ತೆ ಆರ್. ಪೂರ್ಣಿಮಾ ಮಾತನಾಡಿ, ‘ಗಾಂಧೀಜಿ ಜಾಗತಿಕವಾಗಿ ಹರಡಿರುವ ರೀತಿ ನಮ್ಮೆಲ್ಲರಿಗೂ ಪಾಠವಾಗಬೇಕು. ನಿಜ ಅರ್ಥದಲ್ಲಿ ಅವರೇ ವಿಶ್ವಗುರು. ‘ಪ್ರಿಯ ಗಾಂಧಿ’ ಕೃತಿಯಲ್ಲಿ ನಾವು ಮನಗಾಣಬೇಕಾದ, ಚರ್ಚಿಸಬೇಕಾದ ಹಲವು ವಿಷಯಗಳು ಇವೆ’ ಎಂದರು.</p><p>ಪತ್ರಕರ್ತ ಸುದರ್ಶನ ಚನ್ನಂಗಿಹಳ್ಳಿ ಮಾತನಾಡಿ, ‘ಗಾಂಧಿ ಪೀಠಗಳು, ಗಾಂಧಿ ಅಧ್ಯಯನ ಕೇಂದ್ರಗಳು ಸೊರಗುತ್ತಿವೆ. ಇವುಗಳನ್ನು ಸಶಕ್ತಗೊಳಿಸಿದರೆ ಗಾಂಧಿ ಚಿಂತನೆಗಳನ್ನು ಹರಡಲು ಸಹಕಾರಿ ಆಗಲಿದೆ’ ಎಂದು ತಿಳಿಸಿದರು.</p><p>ಪತ್ರಕರ್ತ ಜಿ.ಎನ್.ಮೋಹನ್, ಬಹುರೂಪಿಯ ಶ್ರೀಜಾ ವಿ.ಎನ್. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸರ್ಕಾರ ನೀಡುತ್ತಿರುವ ಭಾಗ್ಯಗಳನ್ನು ಮಹಿಳಾ ದೃಷ್ಟಿಕೋನದಿಂದ ನೋಡುವ ಅಗತ್ಯವಿದೆ’ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಆರ್. ಸುನಂದಮ್ಮ ಅವರು ಅಭಿಪ್ರಾಯಪಟ್ಟರು.</p><p>ಬಹುರೂಪಿ ಪ್ರಕಾಶನ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ ಚೀ.ಜ.ರಾಜೀವ ಅವರ ‘ಪ್ರಿಯ ಗಾಂಧಿ’ ಪುಸ್ತಕ ಜನಾರ್ಪಣೆಗೊಳಿಸಿ ಅವರು ಮಾತನಾಡಿದರು.</p><p>‘ಭಾಗ್ಯಗಳನ್ನು ಕೊಡುಗೆಯಾಗಿ ನೋಡದೆ ಅದನ್ನು ಪರ್ಯಾಯ ದೃಷ್ಟಿಕೋನದಿಂದ ನೋಡಬೇಕಾದ ಅಗತ್ಯವಿದೆ. ಮಹಿಳಾ ಸಬಲೀಕರಣಕ್ಕೆ ಅದು ನೀಡಿರುವ ಕೊಡುಗೆ ದೊಡ್ಡದು. ಇವು ಗಾಂಧೀಜಿ ಅವರ ದೃಷ್ಟಿಕೋನವನ್ನು ಹೊಂದಿವೆ’ ಎಂದರು.</p>.<p>ಪತ್ರಕರ್ತೆ ಆರ್. ಪೂರ್ಣಿಮಾ ಮಾತನಾಡಿ, ‘ಗಾಂಧೀಜಿ ಜಾಗತಿಕವಾಗಿ ಹರಡಿರುವ ರೀತಿ ನಮ್ಮೆಲ್ಲರಿಗೂ ಪಾಠವಾಗಬೇಕು. ನಿಜ ಅರ್ಥದಲ್ಲಿ ಅವರೇ ವಿಶ್ವಗುರು. ‘ಪ್ರಿಯ ಗಾಂಧಿ’ ಕೃತಿಯಲ್ಲಿ ನಾವು ಮನಗಾಣಬೇಕಾದ, ಚರ್ಚಿಸಬೇಕಾದ ಹಲವು ವಿಷಯಗಳು ಇವೆ’ ಎಂದರು.</p><p>ಪತ್ರಕರ್ತ ಸುದರ್ಶನ ಚನ್ನಂಗಿಹಳ್ಳಿ ಮಾತನಾಡಿ, ‘ಗಾಂಧಿ ಪೀಠಗಳು, ಗಾಂಧಿ ಅಧ್ಯಯನ ಕೇಂದ್ರಗಳು ಸೊರಗುತ್ತಿವೆ. ಇವುಗಳನ್ನು ಸಶಕ್ತಗೊಳಿಸಿದರೆ ಗಾಂಧಿ ಚಿಂತನೆಗಳನ್ನು ಹರಡಲು ಸಹಕಾರಿ ಆಗಲಿದೆ’ ಎಂದು ತಿಳಿಸಿದರು.</p><p>ಪತ್ರಕರ್ತ ಜಿ.ಎನ್.ಮೋಹನ್, ಬಹುರೂಪಿಯ ಶ್ರೀಜಾ ವಿ.ಎನ್. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>