ಬಹುಭಾಷಾ ವಿದ್ವಾಂಸ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್, ‘ವರ್ತಮಾನದ ಅನೇಕ ಪರಿಕರಗಳನ್ನು ಬಳಸಿಯೂ ವರ್ತಮಾನದ ತಲ್ಲಣಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗದಿದ್ದಾಗ ಪುರಾಣ, ಕಾವ್ಯ, ಶಾಸ್ತ್ರಗಳನ್ನು ಓದಿ ಅರ್ಥೈಸಿಕೊಳ್ಳುತ್ತೇವೆ. ಇಂದಿನ ಕಾಲಘಟ್ಟದ ತಲ್ಲಣಗಳನ್ನು ಅರ್ಥಮಾಡಿಕೊಳ್ಳಲು ಗಾಂಧಿ, ರಾಮಕೃಷ್ಣ ಪರಮಹಂಸ, ವಿವೇಕಾನಂದ, ಅಂಬೇಡ್ಕರ್ ಅವರನ್ನು ಮರು ಓದುತ್ತೇವೆ. ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೋಭೆಗಳ ಬೇರೆ ಬೇರೆ ಸಮಸ್ಯೆಗಳನ್ನು ಇಂತಿಜಾರ್ ಹುಸೇನ್ ಅವರು ಕಥನಗಳ ಮೂಲಕ ಸಶಕ್ತವಾಗಿ ಕಟ್ಟಿಕೊಟ್ಟಿದ್ದಾರೆ’ ಎಂದರು.