‘ಈ ಸಮಯದಲ್ಲಿ ಮಹಿಳಾ ಸಾಹಿತ್ಯ ಮುಂಚೂಣಿಗೆ ಬರುತ್ತಿವೆ. ಅದು ಪ್ರಖರವಾಗಿ ಎಲ್ಲೆಡೆ ಪ್ರಕಟವಾಗುತ್ತಿದೆ. ಧಾವಂತದ ವಾತಾವರಣವನ್ನು ಈಗಿನ ಸ್ಪರ್ಧೆಗಳು ರೂಪಿಸುತ್ತಿವೆ. ಈ ರೀತಿಯ ಧಾವಂತವನ್ನು ದಾಟಬೇಕಾದ ಅನಿವಾರ್ಯತೆ ಈ ಕಾಲದ ಕತೆಗಾರರಿಗೆ ಇದೆ’ ಎಂದು ಹಿರಿಯ ಸಾಹಿತಿ ಕೇಶವ ಮಳಗಿ ಅವರು ಹೇಳಿದರು. ಪ್ರಕಾಶಕ ಚಲಂ ಹಾಡ್ಲಹಳ್ಳಿ, ನಾಟಕಕಾರ ಬೇಲೂರು ರಘುನಂದನ್ ಮಾತನಾಡಿದರು.