ವಸಂತ ಪ್ರಕಾಶನ ಪ್ರಕಟಿಸಿರುವ ಎಚ್.ಎಸ್. ವೆಂಕಟೇಶಮೂರ್ತಿ ಅವರು ಸಂಪಾದಿಸಿರುವ ‘ವಸಂತ ಬಾಲ ಸಾಹಿತ್ಯ ಮಾಲೆ’ಯ 12 ಮಕ್ಕಳ ಕೃತಿಗಳನ್ನು ಬಿಡುಗಡೆ ಮಾಡಿ ಮಾತ ನಾಡಿದ ಅವರು, ‘ಆಟ ಮತ್ತು ಊಟದ ಹೊತ್ತಿನಲ್ಲೂ ಮಕ್ಕಳಲ್ಲಿ ಪ್ರಪಂಚ ಜ್ಞಾನವನ್ನು ಸೃಜನಶೀಲವಾಗಿ ತುಂಬುತ್ತಿದ್ದರು. ಈಗಿನ ಮಕ್ಕಳಿಗೆ ಮೊಬೈಲ್ ಇಲ್ಲದೆ ಊಟ ಮಾಡಿಸು ವುದೇ ಕಷ್ಟ. ಫೋನ್ನಲ್ಲಿ ಬರುವ ಚಿತ್ರ ಗಳಿಗೂ, ತಿನ್ನುವ ತುತ್ತಿಗೂ ಸಂಬಂಧವೇ ಇರುವುದಿಲ್ಲ. ನವ್ಯ ಸಾಹಿತಿಗಳು ಮಕ್ಕಳ ಸಾಹಿತ್ಯದಿಂದ ದೂರವಾಗಿದ್ದರು. ಮಹಾಕಾವ್ಯಗಳನ್ನೂ ರಚಿಸಿರುವ ಎಚ್.ಎಸ್. ವೆಂಕಟೇಶಮೂರ್ತಿ ಅವರು 12 ಮಕ್ಕಳ ಕೃತಿಗಳನ್ನು ತಮ್ಮ ಸಂಪಾದಕತ್ವದಲ್ಲಿ ಹೊರ ತಂದಿರುವುದು ಸಂತಸದ ಸಂಗತಿ’ ಎಂದು ಹೇಳಿದರು.