ಕರ್ನಾಟಕ ಕನ್ನಡ ಬರಹಗಾರರ ಹಾಗೂ ಪ್ರಕಾಶಕರ ಸಂಘವು ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗೌರವ ಅಭಿನಂದನೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಮಾತನಾಡಿದರು. ‘ಪುಸ್ತಕವನ್ನು ಉದ್ಯಮವನ್ನಾಗಿ ಮಾತ್ರ ನೋಡದೆ, ಅದನ್ನು ಸಂಸ್ಕೃತಿಯ ಭಾಗವಾಗಿ ನೋಡುವಂತೆ ಮಾಡಬೇಕಾದ ಹೊಣೆ ನಮ್ಮೆಲ್ಲರ ಮೇಲಿದೆ. ಅದಕ್ಕಾಗಿ ಪುಸ್ತಕದ ಗುಣಮಟ್ಟ, ಉತ್ಪಾದನೆಯ ಮೌಲ್ಯ ಹೆಚ್ಚುವಂತೆ ಮಾಡಬೇಕು’ ಎಂದು ತಿಳಿಸಿದರು.