‘ಕೇಂದ್ರ ಸರ್ಕಾರ ನೇಮಿಸಿರುವ ಮಹಾಜನ ಆಯೋಗದ ವರದಿಯೇ ಅಂತಿಮ ಎನ್ನುವುದು ಈವರೆಗಿನ ಎಲ್ಲ ರಾಜ್ಯ ಸರ್ಕಾರಗಳ ನಿಲುವು. ಗಡಿ ವಿವಾದವನ್ನು ತೀರ್ಮಾನಿಸಬೇಕಾಗಿರುವುದು ಕೇಂದ್ರ ಸರ್ಕಾರವೇ ಹೊರತು, ನ್ಯಾಯಾಲಯ ಅಲ್ಲ ಎನ್ನುವುದು ಕರ್ನಾಟಕ ಸರ್ಕಾರದ ನಿಲುವು. ಕರ್ನಾಟಕಕ್ಕೆ ಸೇರಿರುವ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟಿನ ಮೊರೆ ಹೋದ ದಿನದಿಂದ ಇದು ನಮ್ಮ ನಿಲುವಾಗಿದೆ. ನೆಲ-ಜಲ-ಭಾಷೆಯ ರಕ್ಷಣೆಗಾಗಿ ರಾಜ್ಯ ಸರ್ಕಾರ ಕೈಗೊಳ್ಳುವ ನ್ಯಾಯಬದ್ಧವಾದ ಎಲ್ಲ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸಲಿದೆ’ ಎಂದಿದ್ದಾರೆ.